ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬಣಗಳ ನಡುವಿನ ತಿಕ್ಕಾಟದ ನಡುವೆ ಭಾರತೀಯ ಚುನಾವಣಾ ಆಯೋಗವು ಶನಿವಾರ ಶಿವಸೇನೆಯ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ಸ್ಥಗಿತಗೊಳಿಸಿದೆ.
ಮುಂದುವರೆದು, ಅಕ್ಟೋಬರ್ 11 ರಂದು ಮಧ್ಯಾಹ್ನ 1 ಗಂಟೆಯೊಳಗೆ ತಮ್ಮ ಪಕ್ಷದ ಚಿಹ್ನೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗವು ಎರಡೂ ಬಣಗಳಿಗೆ ಸೂಚನೆ ನೀಡಿದೆ.
ಎರಡೂ ಬಣಗಳು ಶಿವಸೇನಾ ಚಿಹ್ನೆಯಾದ ಬಿಲ್ಲು ಬಾಣದ ಗುರುತನ್ನು ಬಳಸದಂತೆ ಸೂಚಿಸಲಾಗಿದೆ. ಶಿವಸೇನಾಗಾಗಿ ಕಾಯ್ದಿರಿಸಲಾಗಿರುವ ಬಿಲ್ಲು ಮತ್ತು ಬಾಣದ ಗುರುತನ್ನು ಎರಡು ಗುಂಪುಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಬಿಲ್ಲು, ಬಾಣ ನಮ್ಮ ಪಕ್ಷದ ಚಿಹ್ನೆ ಎಂದು ಎರಡು ಬಣದಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಬಂದಿತ್ತು, ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬಣಗಳ ನಡುವಿನ ತಿಕ್ಕಾಟದ ನಡುವೆ ಭಾರತೀಯ ಚುನಾವಣಾ ಆಯೋಗವು ಶನಿವಾರ ಶಿವಸೇನೆಯ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ತಡೆ ಹಿಡಿದಿದೆ. ಕೆಲವು ಮಾಧ್ಯಮ ವಲಯಗಳಲ್ಲಿನ ಊಹಾಪೋಹಗಳನ್ನು ತಳ್ಳಿಹಾಕಿರುವ ಶಿವಸೇನಾ ಅಧ್ಯಕ್ಷ, ಉದ್ಧವ್ ಠಾಕ್ರೆ, ಪಕ್ಷದ ಐಕಾನಿಕ್ ‘ಬಿಲ್ಲು ಮತ್ತು ಬಾಣ’ ಚುನಾವಣಾ ಚಿಹ್ನೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಹೇಳಿದ್ದರು.
Shiv Sena's 'Bow & Arrow' symbol claim | Election Commission of India passes interim order, says in Andheri East bye polls neither of the two groups shall be permitted to use the symbol "Bow & Arrow", reserved for "Shivsena". pic.twitter.com/QtC9iNhZ0X
— ANI (@ANI) October 8, 2022
BREAKING NEWS : ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ