ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಚಲನಚಿತ್ರ ನಿರ್ಮಾಪಕ ಸಾಜಿದ್ ಖಾನ್ ಬಿಗ್ ಬಾಸ್-16 ಸೀಸನ್ ನಲ್ಲಿ ಭಾಗವಹಿಸಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದ್ದಾರೆ. ಸಾಜಿದ್ ನನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಒತ್ತಾಯ ಕೇಳಿಬರುತ್ತಿದೆ.
ದೆಹಲಿ ಮಹಿಳಾ ಸಮಿತಿಯ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಪತ್ರ ಬರೆದು, #MeToo ಆಂದೋಲನದ ಸಮಯದಲ್ಲಿ ಹಲವಾರು ಮಹಿಳೆಯರು ತಮ್ಮ ವಿರುದ್ಧ ಮಾಡಿದ ಲೈಂಗಿಕ ಕಿರುಕುಳದ ಆರೋಪದ ಮೇಲೆ ಅವರನ್ನು ರಿಯಾಲಿಟಿ ಶೋನಿಂದ ಹೊರಹಾಕುವಂತೆ ಒತ್ತಾಯಿಸಿದ್ದರು, ಇದರ ವಿರುದ್ಧ ಕೇಂದ್ರ ಸಚಿವರಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದ್ದರು.
ಇದೀಗ , ಸ್ವಾತಿ ಅವರಿಗೆ ಜೀವ ಬೆದರಿಕೆ (Life Threat) ಕರೆಗಳು ಬರುತ್ತಿವೆಯಂತೆ. ಈ ವಿಷಯವನ್ನು ಸ್ವತಃ ಅವರೇ ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾಜಿದ್ ಅತ್ಯಾಚಾರ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನನಗೆ ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ನಾನು ದೆಹಲಿ ಪೊಲೀಸರಿಗೆ ದೂರು ನೀಡುತ್ತಿದ್ದೇನೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸಿ. ಅವರ ಹಿಂದೆ ಇರುವವರನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ. ಇಂತಹ ವ್ಯಕ್ತಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸುವ ಮೂಲಕ ಯಾವ ಸಂದೇಶವನ್ನು ಸಾರುತ್ತಿದ್ದೀರಿ ಎಂದು ಚಾನೆಲ್ ನವರಿಗೂ ಪ್ರಶ್ನೆ ಮಾಡಿದ್ದಾರೆ.
‘ಗದ್ದೆಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ KSRTC ಬಸ್’ : ಮಂಡ್ಯದಲ್ಲಿ ತಪ್ಪಿದ ಭಾರಿ ದುರಂತ