ಧಾರವಾಡ : ಕಾಂಗ್ರೆಸ್ ಪಕ್ಷ ಗಾಂಧಿ ಟೋಪಿಯನ್ನು ಮುಂದಿಟ್ಟುಕೊಂಡು ಇಡೀ ಸಮಾಜಕ್ಕೆ ಟೋಪಿ ಹಾಕುವ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ಗಾಂಧಿ ಟೋಪಿಯನ್ನು ಮುಂದಿಟ್ಟುಕೊಂಡು ಇಡೀ ಸಮಾಜಕ್ಕೆ ಟೋಪಿ ಹಾಕುವ ಕೆಲಸ ಮಾಡಿದೆ, ಮಹಾತ್ಮ ಗಾಂಧಿಗೂ ಹಾಗೂ ರಾಹುಲ್ ಗಾಂಧಿಗೂ ಏನು ಸಂಬಂಧ, ಯಾರಾದರೂ ಹೇಳಬಲ್ಲಿರಾ?. ದೇಶವನ್ನು ಜೋಡಿಸಿದವರು ಯಾರು, ವಿಭಜನೆ ಮಾಡಿದವರು ಯಾರು ಎಂಬುದು ಜನತೆಗೆ ಗೊತ್ತಿದೆ. ಇದೀಗ ಕಾಂಗ್ರೆಸ್ ಭಾರತ್ ಜೋಡೋ (Bharat Jodo Yatra) ಯಾತ್ರೆ ಮಾಡುತ್ತಿದೆ ಎಂದು ಲೇವಡಿ ಮಾಡಿದರು.
ಒಂದು ಕಡೆ ಡಿಕೆಶಿ (ಇನ್ನೊಂದು ಕಡೆ ಸಿದ್ದು, ಇಬ್ಬರನ್ನೂ ಮುಗಿಸಲು ಖರ್ಗೆ ಬಣ ರೆಡಿಯಾಗಿದೆ. ಖರ್ಗೆಯನ್ನು ಸೋಲಿಸಲು ಪ್ರಯತ್ನಿಸಿದ್ದು ಸಿದ್ದರಾಮಯ್ಯ ಆದರೆ, ಇದೀಗ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯನವರನ್ನು ಓಡಿಸಿದರು. ಬಾದಾಮಿ ಜನ ಈ ಬಾರಿ ನಮ್ಮ ಕ್ಷೇತ್ರಕ್ಕೆ ಬರಬೇಡಿ ಎಂದು ಸಿದ್ದರಾಮಯ್ಯನವರಿಗೆ ಹೇಳಿದ್ದಾರೆ. ಸಿದ್ದರಾಮಯ್ಯ ಈಗ ಜಾಗ ಹುಡುಕುವ ಯಾತ್ರೆ ಮಾಡಬೇಕು ಎಂದರು.
HEALTH TIPS : ಹೃದಯ ಸಂಬಂಧಿ ಸಮಸ್ಯೆಗಳು ‘ಶ್ವಾಸಕೋಶ’ದ ಕಾಯಿಲೆಗಳಿಗೆ ಕಾರಣವಾಗುತ್ತವೆಯೇ? ಇಲ್ಲಿದೆ ಮಹತ್ವದ ಮಾಹಿತಿ