ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಹಿಜಬ್ (Hijab) ಕುರಿತು ಸುಪ್ರೀಂ ಕೋರ್ಟ್ ದ್ವಿ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ರಾಜ್ಯದ ನಾಯಕರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಈ ಕುರಿತು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಪ್ರತಿಕ್ರಿಯೆ ನೀಡಿದ್ದಾರೆ.
ಹಿಜಾಬ್ ವಿವಾದ ಸಿಐಜೆಗೆ ಹೋಗಿರುವುದರಿಂದ ಸರ್ಕಾರ ಯಾವುದೇ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದರು.
ನ್ಯಾಯಾಲಯ ತೀರ್ಪು ಕೊಟ್ಟು ಪುನಃ ಸಿಜೆಐಗೆ ಒಪ್ಪಿಸಿದೆ ಅಂದರೆ ಕೇಸ್ ಇನ್ನೂ ಪೆಂಡಿಂಗ್ ಇದೆ ಅಂತ ಅರ್ಥ. ಈಗ ಸಿಜೆಐ ಬಳಿಗೆ ಅಲ್ಲಿ ಅಂತಿಮ ತೀರ್ಮಾನ ಕೈಗೊಂಡ ಮೇಲೆಯೇ ಹಿಜಬ್ ವಿವಾದಕ್ಕೆ ತೆರೆ ಬಿಳಲಿದೆ. ಮುಂದಿನ ಹಂತದಲ್ಲಿ ಸರ್ಕಾರ ಏನಾದರೂ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇತ್ತು. ಆದರೆ ಈಗ ಕೋರ್ಟ್ ಸಿಜೆಐಗೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು. ಸಿಜೆಐ ಈ ಪ್ರಕರಣದ ಆಳಗಲವನ್ನು ಅಧ್ಯಯನ ಮಾಡಿ ತೀರ್ಪನ್ನು ನೀಡಲಿದೆ. ಅಲ್ಲಿಯವರೆಗೆ ಕಾಯಬೇಕು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
‘ವರ್ಗಾವಣೆ ನಿರೀಕ್ಷೆ’ಯಲ್ಲಿದ್ದಂತ ರಾಜ್ಯದ ‘ಶಾಲಾ ಶಿಕ್ಷಕರು, ಉಪನ್ಯಾಸಕ’ರಿಗೆ ಮಹತ್ವದ ಮಾಹಿತಿ
ಸಿದ್ದರಾಮಯ್ಯ ಈಗ ಜಾಗ ಹುಡುಕುವ ಯಾತ್ರೆ ಮಾಡಬೇಕು : ನಳಿನ್ ಕುಮಾರ್ ಕಟೀಲ್ ವ್ಯಂಗ್ಯ