ತಮಿಳುನಾಡು : ಮಾಜಿ ಮುಖ್ಯಮಂತ್ರಿ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸಂಸ್ಥಾಪಕ ಎಂಜಿ ರಾಮಚಂದ್ರನ್ ಅವರ ಪ್ರತಿಮೆಯನ್ನು ತಮಿಳುನಾಡಿನ ಕಡಲೂರು ಗ್ರಾಮವೊಂದರಲ್ಲಿ ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
ಶುಕ್ರವಾರ ತಿಟ್ಟಕುಡಿ ಸಮೀಪದ ಗ್ರಾಮವೊಂದರಲ್ಲಿ ಎಂಜಿಆರ್ ಪ್ರತಿಮೆಯ ಒಂದು ತೋಳು ಮುರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಒಂದು ತಿಂಗಳೊಳಗೆ ಇದು ಎರಡನೇ ಘಟನೆಯಾಗಿದೆ.
ಘಟನೆ ಸಂಬಂಧ ಪೊಲೀಸರು ದುಷ್ಕರ್ಮಿಗಳನ್ನು ಹಿಡಿಯಲು ತನಿಖೆ ಆರಂಭಿಸಿದ್ದಾರೆ, ಆದರೆ ಆ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ ಪೊಲೀಸರು ಬೇರೆ ಆಯಾಮದಲ್ಲಿ ತನಿಖೆ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.