ನವದೆಹಲಿ: ವಸಾಹತುಶಾಹಿ ಕಾನೂನುಗಳನ್ನು ಹಿಮ್ಮೆಟ್ಟಿಸುವ ಮೂಲಕ ವಸಾಹತುಶಾಹಿಯ ಸಂಕೋಲೆಗಳನ್ನು ಮುರಿಯುವುದು ಮುಖ್ಯ, ಆಗ ಮಾತ್ರ ಭಾರತವು ನಿಜವಾದ ಅರ್ಥದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಕೆವಾಡಿಯಾದ ಏಕ್ತಾ ನಗರದಲ್ಲಿ ‘ಏಕತಾ ಪ್ರತಿಮೆ’ಯ ಬಳಿ ಎರಡು ದಿನಗಳ ‘ಅಖಿಲ ಭಾರತ ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಸಮಾವೇಶ’ದ ಉದ್ಘಾಟನಾ ಅಧಿವೇಶನದಲ್ಲಿ ಅವರು ಮಾತನಾಡಿದ್ದಾರೆ, ಇದೇ ವೇಳೆ ಅವರು ಕಾನೂನುಗಳನ್ನು ಸ್ಪಷ್ಟ ರೀತಿಯಲ್ಲಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಬೇಕು, ಇದರಿಂದ ಕಡುಬಡವರು ಅವುಗಳನ್ನು ಅರ್ಥಮಾಡಿಕೊಳ್ಳಬಹುದು ಎಂದು ಮೋದಿ ಹೇಳಿದರು.
“ನ್ಯಾಯವನ್ನು ಪಡೆಯುವಲ್ಲಿನ ವಿಳಂಬವು ನಮ್ಮ ದೇಶದ ಜನರು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ” ಎಂದು ಮೋದಿ ಹೇಳಿದರು. ಭಾರತೀಯ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ನೀತಿ ನಿರೂಪಕರಿಗೆ ಒಂದು ಸಾಮಾನ್ಯ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಎರಡು ದಿನಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ.