ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಘೋಷಣೆ ಮಾಡಿದ್ದಾರೆ. ಗಂಧದ ಗುಡಿ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಇದು.ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ ಚಿತ್ರಕ್ಕೆ ಸರ್ಕಾರ ಖಂಡಿತ ತೆರಿಗೆ ವಿನಾಯಿತಿ ಘೋಷಿಸುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ನಮ್ಮಅಪ್ಪು ಎಲ್ಲರಿಗೂ ಪ್ರಿಯ, ನಿಸರ್ಗ ಕಾಡು ಪ್ರಾಣಿ ನಡುವೆ ನಡೆದ ಘಟನೆಯೇ ಸಿನಿಮಾ ಗಂಧದ ಗುಡಿ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಹಳ ಸಂತೋಷವಾಗುತ್ತದೆ. ಅಪ್ಪು ನಮ್ಮ ಜೊತೆ ಇದ್ದಾರೆ ಎಂದು ಅನಿಸುತ್ತಿದೆ. . ಆದ್ರೇ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅಪ್ಪು ಬಹಳಷ್ಟು ವರ್ಷ ಬದುಕಿ ಬಾಳ ಬೇಕಿತ್ತು ಈ ನೋವು ಈಗಲೂ ಕಾಡುತ್ತಿದೆ.. ನವೆಂಬರ್ ಒಂದರಂದು ಅಪ್ಪುಗೆ ಕರ್ನಾಟಕ ರತ್ನ ನೀಡಲಿದ್ದೆವೆ . ಅದು ಎಲ್ಲ ಯುವಕರಿಗೆ ಪ್ರೇರಣೆ ಎಂದು ಭಾವಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ. ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮಕ್ಕಾಗಿ ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಸೇರಿದ್ದಾರೆ.
ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್ ((Gandhada Gudi pre-release event ನಡೆಯುತ್ತಿದೆ. ಪುನೀತ್ ರಾಜ್ಕುಮಾರ್ ಅವರಿಗೆ ಎಲ್ಲರೂ ಸೇರಿ ವಿಶೇಷ ರೀತಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ((Ashwini Puneeth Rajkumar), ಶಿವರಾಜ್ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಇಡೀ ಭಾರತ ಚಿತ್ರರಂಗದ ದಿಗ್ಗಜ ಗಣ್ಯರು ಭಾಗಿಯಾಗಿದ್ದಾರೆ.
BREAKING NEWS : ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಆಗಮನ |Basavaraj Bommai
Deepavali Festival : ದೀಪಾವಳಿ ಹಬ್ಬದ ಇತಿಹಾಸ, ಮಹತ್ವ ಮತ್ತು ಇದರ ಉದ್ದೇಶ ತಿಳಿಯಿರಿ