ಧಾರವಾಡ : ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.
BIGG NEWS : ಅ.26ಕ್ಕೆ ರಾಜ್ಯದ ಎಲ್ಲ ಪಶು ಆಸ್ಪತ್ರೆ, ಗೋಶಾಲೆಗಳಲ್ಲಿ `ಗೋಪೂಜೆ’ : ಸಚಿವ ಪ್ರಭು ಚವ್ಹಾಣ್ ಆದೇಶ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಭಾಗವಹಿಸಲು ಹಿಂಗಾರು ಹಂಗಾಮಿಗೆ ಗ್ರಾಮ ಪಂಚಾಯತಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾದ ಕಡಲೆ (ಮಳೆ ಆಶ್ರಿತ), ಮತ್ತು ಜೋಳ (ಮಳೆ ಆಶ್ರಿತ), ಬೆಳೆಗಳಿಗೆ ನವೆಂಬರ್ 30 ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತ ಬೆಳೆಗಳಾದ ಹುರುಳಿ (ಮಳೆ ಆಶ್ರಿತ), ಕುಸುಮೆ (ಮಳೆ ಆಶ್ರಿತ), ಸೂರ್ಯಕಾಂತಿ (ಮಳೆ ಆಶ್ರಿತ), ಬೆಳೆಗಳಿಗೆ ನವೆಂಬರ್ 15 ಹಾಗೂ ಕಡಲೆ (ಮಳೆ ಆಶ್ರಿತ), ಹೆಸರು (ಮಳೆ ಆಶ್ರಿತ), ಜೋಳ (ನೀರಾವರಿ), ಮುಸುಕಿನ ಜೋಳ (ನೀರಾವರಿ), ಸೂರ್ಯಕಾಂತಿ (ನೀರಾವರಿ) ಹಾಗೂ ಗೋಧಿ (ಮಳೆ ಆಶ್ರಿತ) ಬೆಳೆಗಳಿಗೆ ನವೆಂಬರ್ 30 ಮತ್ತು ಗೋಧಿ (ನೀರಾವರಿ) ಬೆಳೆಗೆ ಡಿಸೆಂಬರ್ 16, ಕಡಲೆ (ನೀರಾವರಿ) ಬೆಳೆಗೆ ಡಿಸೆಂಬರ್ 31 ವಿಮೆ ಮಾಡಿಸಲು ಕೊನೆಯ ದಿನವಾಗಿದೆ.
BIGG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಅಪ್ಪು ಆ್ಯಂಬುಲೆನ್ಸ್ ಸೇವೆ’ ಆರಂಭ : ನಟ ಪ್ರಕಾಶ್ ರೈ ಘೋಷಣೆ
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟಕ್ಕೆ ಅಧಿಸೂಚಿತವಾದ ನೆಲಗಡಲೆ (ಶೇಂಗಾ) ನೀರಾವರಿ ಬೆಳೆಗೆ ಏಮೆ ನೊಂದಾಯಿಸಲು ಫೆಬ್ರುವರಿ 28, 2023 ಕೊನೆಯ ದಿನಾಂಕವಾಗಿದೆ ರೈತರು ಕೊನೆಯ ದಿನಾಂಕದೊಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಐಸಿಐಸಿಐ ಲ್ಯಾಂಬರ್ಡ್ ಜನರಲ್ ಇನ್ಸೂರೆನ್ಸ್ ಕಂಪನಿ, 2ನೇ ಮಹಡಿ, ಬೆಲ್ಲದ ಕಾಂಪ್ಲೆಕ್ಸ್, ಗೋಕುಲ ರೋಡ್, ಹುಬ್ಬಳ್ಳಿ ಅಥವಾ ಸಮೀಪದ ಉಪ ಕೃಷಿನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಐಸಿಐಸಿಐ ಲ್ಯಾಂಬರ್ಡ್ ಜನರಲ್ ಇನ್ಸೂರೆನ್ಸ್ ಕಂಪನಿ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ರಾಜಶೇಖರ್ ಐ.ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.