ನವದೆಹಲಿ: ದೆಹಲಿಯ ಕೆಂಪು ಕೋಟೆಯ ಸೇನಾ ಬ್ಯಾರಕ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮೊಹಮ್ಮದ್ ಅಶ್ಫಾಕ್ ಗಲ್ಲು ಶಿಕ್ಷೆಯ ತೀರ್ಪನ್ನು ಸುಪ್ರೀಮಕೋರ್ಟ್ ಎತ್ತಿ ಹಿಡಿದಿದೆ.
2000 ರ ಡಿಸೆಂಬರ್ 22 ರಂದು ದೆಹಲಿಯ ಕೆಂಪು ಕೋಟೆಯ ಸೇನಾ ಬ್ಯಾರಕ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ಅಪರಾಧಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಮೊಹಮ್ಮದ್ ಅಶ್ಫಾಕ್ ಅಲಿಯಾಸ್ ಆರಿಫ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಇಂದ ು ತನ್ನ ತೀರ್ಪನ್ನು ಪ್ರಕಟಿಸಿದ್ದು, ಅಶ್ಪಾಕ್ ಗೆ ಗಲ್ಲು ಶಿಕ್ಷೆ ತೀರ್ಪುನ್ನು ಎತ್ತಿ ಹಿಡಿದಿದೆ.
ಜುಲೈ 2019 ರಲ್ಲಿ, ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪಾಕಿಸ್ತಾನದ ಪ್ರಜೆ ಆರಿಫ್ ಅಲಿಯಾಸ್ ಅಶ್ಫಾಕ್ ಸಲ್ಲಿಸಿದ್ದ ಅರ್ಜಿಯನ್ನು ಮುಕ್ತ ನ್ಯಾಯಾಲಯದಲ್ಲಿ ಮರು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಆರಿಫ್ ಗೆ ಮರಣದಂಡನೆ ವಿಧಿಸಲಾಗಿದೆ. ಡಿಸೆಂಬರ್ 22, 2000 ರಂದು ನಡೆದ ಈ ಭಯೋತ್ಪಾದಕ ದಾಳಿಯಲ್ಲಿ, ಮೂವರು ಸೈನಿಕರೊಂದಿಗೆ ಅನೇಕ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದರು.