ದಾವಣಗೆರೆ : ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( Renukacharya) ಸಹೋದರನ ಪುತ್ರ ‘ಚಂದ್ರಶೇಖರ್ (24) ಮೃತದೇಹ ಇಂದು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಂದು ದಾವಣಗೆರೆ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಚಂದ್ರಶೇಖರ್ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚಂದ್ರಶೇಖರ್ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.
ಘಟನೆ ಸಂಬಂಧ ಈಗಾಗಲೇ ದುರಂತ ನಡೆದ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ( ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು) ಧಾವಿಸಿ ಪರಿಶೀಲನೆ ನಡೆಸಿದೆ. ಎಫ್ ಎಸ್ ಎಲ್ ವರದಿಯಿಂದ ಸಾವಿನ ಸತ್ಯಾನುಸತ್ಯತೆ ಬಯಲಾಗಲಿದೆ.
ಇನ್ನೂ, ಇಂದು ಚಂದ್ರಶೇಖರ್ ಶವ ಪತ್ತೆಯಾಗುತ್ತಿದ್ದಂತೆ ರೇಣುಕಾಚಾರ್ಯ ಆಕ್ರಂದನ ಮುಗಿಲು ಮುಟ್ಟಿದೆ. ನಿನ್ನ ಸಾವಿಗೆ ನಾನೇ ಕಾರಣ..ಚಂದ್ರು ಚಂದ್ರು ಎಂದು ಗೋಗರೆದಿದ್ದಾರೆ. ಯಾರು ಕೂಡ ಶವ ಎನ್ನಬೇಡಿ, ಚಂದ್ರು ಎಂದು ಕರೆಯಿರಿ, ನನ್ನ ಶವಕ್ಕೆ ನೀನು ಬೆಂಕಿ ಇಡಬೇಕಾಗಿತ್ತು, ಆದರೆ ನೀನೆ ಹೋಗಿಬಿಟ್ಟೆ,,ಎಂದು ಮಗನನ್ನು ಅಪ್ಪಿಕೊಂಡು ರೇಣುಕಾಚಾರ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಾರಿನಲ್ಲಿ ಇಬ್ಬರು ಚಲಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಮತಿ ಬಳಿ ಚಂದ್ರಶೇಖರ್ ಕಾರಿನಲ್ಲಿ ಇಬ್ಬರು ಚಲಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್ ಜೊತೆ ಮತ್ತೊಬ್ಬರು ಪ್ರಯಾಣಿಸಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಕಾರಿನಲ್ಲಿ ಚಂದ್ರಶೇಖರ್ ಶವ ಮಾತ್ರ ಪತ್ತೆಯಾಗಿದೆ. ಇದರಿಂದ ಸಾಕಷ್ಟು ಶಂಕೆ ವ್ಯಕ್ತವಾಗಿದೆ. ಹೊನ್ನಾಳಿಯಿಂದ 5 ಕಿಮೀ ದೂರವಿರುವ ತುಂಗಾ ಕಾಲುವೆಯಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ.ತನಿಖೆ ಬಳಿಕ ಸತ್ಯಾಂಶ ಬಯಲಾಗಲಿದೆ.
ಶಿಕ್ಷಣ ಸಚಿವರ ಮನಸ್ಸು ಸ್ಥಿಮಿತದಲ್ಲಿಲ್ಲ, ಯೋಗ- ಧ್ಯಾನದ ಅವಶ್ಯಕತೆ ಅವರಿಗೆ ಜಾಸ್ತಿ ಇದೆ : ಸಿದ್ದರಾಮಯ್ಯ ಲೇವಡಿ