ನವದೆಹಲಿ: ರಾಜಧಾನಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ.
ಸಿಸ್ಟಮ್ ಆಫ್ ಏರ್ ಕ್ವಾಲಿಟಿ (SAFAR) ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ ‘ತೀವ್ರ’ ವಿಭಾಗದಲ್ಲಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ನಾಳೆಯಿಂದ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುವುದು. 5 ರಿಂದ 7 ನೇ ತರಗತಿಗಳಿಗೆ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ಹೇಳಿದರು.