ನವದೆಹಲಿ : ವಾಯುಮಾಲಿನ್ಯ ಮತ್ತು ಹದಗೆಡುತ್ತಿರುವ ಗಾಳಿ ಗುಣಮಟ್ಟವು ಕೇವಲ ರಾಷ್ಟ್ರ ರಾಜಧಾನಿಯ ಸಮಸ್ಯೆಯಲ್ಲ. ಕೇಂದ್ರವು ಮಧ್ಯಪ್ರವೇಶಿಸಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ದೆಹಲಿ ಅರವಿಂದ್ ಕ್ರೇಜಿವಾಲ್ ಒತ್ತಾಯಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು ವಾಯು ಮಾಲಿನ್ಯಕ್ಕೆ ಪಂಜಾಬ್ ಮತ್ತು ದೆಹಲಿಯ ಎಎಪಿ ಸರ್ಕಾರಗಳನ್ನು ಮಾತ್ರ ದೂಷಿಸಲು ಸಾಧ್ಯವಿಲ್ಲ. ಕೇಂದ್ರ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇದು ಪಂಜಾಬ್ ಮತ್ತು ದೆಹಲಿಗೆ ಸೀಮಿತವಾದ ಸಮಸ್ಯೆಯಲ್ಲ, ಉತ್ತರ ಭಾರತದ ಸಮಸ್ಯೆ ಎಂದು ಹೇಳಿದ್ದಾರೆ.
ದೆಹಲಿಯ ಗಾಳಿಯ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೂರುವ ಆಟದಿಂದ ದೂರವಿರಬೇಕು ಎಂದು ಅವರು ಕೇಂದ್ರವನ್ನು ಒತ್ತಾಯಿಸಿದರು.
ವಾಸ್ತವವಾಗಿ, AAP ನೇತೃತ್ವದ ಪಂಜಾಬ್ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯಕ್ಕೆ ಕೊಡುಗೆ ನೀಡುತ್ತದೆ ಎಂದು ಅವರು ಒಪ್ಪಿಕೊಂಡರು. ಇದು ಆರೋಪ ಮತ್ತು ರಾಜಕೀಯದ ಸಮಯವಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.