ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ವಿವಾದವಾಗುತ್ತಲೇ ಇದೆ. ಇದೀಗ ಟಿಪ್ಪು ಜಯಂತಿಯನ್ನು ಆಚರಿಸಲು ಅವಕಾಶ ಕೇಳಿದ್ದ ಬೆನ್ನಲ್ಲೇ ಕನಕದಾಸ ಜಯಂತಿ ಆಚರಣೆಗೂ ಮನವಿ ಸಲ್ಲಿಕೆಯಾಗಿದೆ.
BIGG NEWS: ಹುಬ್ಬಳ್ಳಿಯಲ್ಲಿ ಯುವತಿ ವಿಚಾರಕ್ಕೆ ಗಲಾಟೆ: ರೌಡಿ ಕಾರ್ಪೊರೇಟರ್ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಭಾನುವಾರ ಹುಬ್ಬಳ್ಳಿಯ ವಿವಿಧ ಸಂಘಟನೆಗಳ ಹೋರಾಟಗಾರರು, ಇದೇ 10ರಂದು ನಡೆಯಲಿರುವ ಟಿಪ್ಪು ಜಯಂತಿಯನ್ನು ಹುಬ್ಬಳ್ಳಿಯ ಈದ್ಗಾ ಮೈದಾನಲ್ಲಿ ಆಚರಿಸಲು ಅವಕಾಶವನ್ನು ನೀಡಬೇಕು ಎಂದು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದರು.
BIGG NEWS: ಹುಬ್ಬಳ್ಳಿಯಲ್ಲಿ ಯುವತಿ ವಿಚಾರಕ್ಕೆ ಗಲಾಟೆ: ರೌಡಿ ಕಾರ್ಪೊರೇಟರ್ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಈ ಹೋರಾಟವನ್ನು ಎಐಎಂಐಎಂ ಸಂಘಟನೆ ಹಾಗೂ ಸಮತಾ ಸೈನಿಕ ದಳ ಸಂಘಟನೆಗಳ ಕಾರ್ಯಕರ್ತರು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಒಂದು ವೇಳೆ ಅನುಮತಿ ನೀಡದಿದ್ದಲ್ಲಿ ಬಲವಂತವಾಗಿ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಪಾಲಿಕೆ ಹಾಗೂ ಸರ್ಕಾರಕ್ಕೆ ಸಂಘಟನೆಗಳ ಹೋರಾಟಗಾರರು ಎಚ್ಚರಿಕೆ ನೀಡಿದ್ದರು.