ಬೆಂಗಳೂರು: ರಾಜ್ಯ ವಿಪತ್ತು ಹಾಗೂ ತುರ್ತು ಸೇವೆಗಳ ಪಡೆಯನ್ನು ಇನ್ನಷ್ಟು ಹೆಚ್ಚು ಬಲಪಡಿಸಲು ಪ್ರತಿ ಮೂರು ಜಿಲ್ಲೆಗಳಿಗೆ ಒಂದರಂತೆ ಎಸ್ ಡಿಆರ್ ಎಫ್ ಪಡೆಗಳನ್ನು ನಿಯೋಜಿಸಲು ರಾಜ್ಯ ಸರಕಾರ ಯೋಜನೆಯನ್ನು ರೂಪಿಸಿದೆ.
BIGG UPDATE : ‘ಪೋಕ್ಸೋ ಕೇಸ್’ : ‘ಮುರುಘಾ ಶ್ರೀ’ ಸೇರಿ ಮೂವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಧೃಡ…! |Murgha Sri
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ರಾಜ್ಯ ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಹಾಗೂ ಎಸ್ ಡಿಆರ್ ಎಫ್ ನಿರ್ದೇಶನಾಲಯ ವತಿಯಿಂದ ರಾಜಭವನದಲ್ಲಿ ಆಯೋಜಿಸಲಾದ ಜೀವದ ಹಂಗನ್ನು ತೊರೆದು ಸಂಕಷ್ಟಕ್ಕೆ ಒಳಗಾದ ಜನತೆಯನ್ನು ರಕ್ಷಿಸಿದ ಹಾಗೂ ವಿಶಿಷ್ಟ ಸೇವೆಗೈದ ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಕೃತಿಕ ಸಂಕಷ್ಟದ ಸಮಯದಲ್ಲಿ ಕ್ಷಿಪ್ರವಾಗಿ ಸೇವೆ ಸಲ್ಲಿಸಲು ಅನುಕೂಲವಾಗಲು ಸಹಾಯಕವಾಗುವಂತೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
BIGG UPDATE : ‘ಪೋಕ್ಸೋ ಕೇಸ್’ : ‘ಮುರುಘಾ ಶ್ರೀ’ ಸೇರಿ ಮೂವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಧೃಡ…! |Murgha Sri
ನಾಗರಿಕರ ಸುರಕ್ಷತೆ ಹಾಗೂ ಆಸ್ತಿಪಾಸ್ತಿಗಳು ಹಾಗೂ ಸಾರ್ವಜನಿಕ ಸೊತ್ತುಗಳ ರಕ್ಷಣೆ ಮಾಡಲು ಸರಕಾರ ಬದ್ಧವಾಗಿದೆ ಎಂದರು. ಹಲವಾರು ವರ್ಷಗಳ ನಂತರ, ರಾಜ್ಯ ಅಗ್ನಿಶಾಮಕ ದಳವನ್ನು ಬಲಪಡಿಸಲು ಸುಮಾರು 1547 ವಿವಿಧ ದರ್ಜೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಹಾಗೂ ತರಬೇತಿ ನೀಡಲಾಗುತ್ತಿದೆ ಎಂದ ಸಚಿವರು, ಅವಘಡದ ಸಂದರ್ಭದಲ್ಲಿ ಅತ್ಯಂತ ಎತ್ತರದ ಕಟ್ಟಡವನ್ನೂ ತಲುಪಲು ಅನುಕೂಲವಾಗುವಂತೆ, ಸುಮಾರು 30 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಏರಿಯಲ್ ಲ್ಯಾಡರನ್ನು ಇಲಾಖೆಗೆ ಸಮರ್ಪಿಸಲಾಗಿದೆ ಎಂದರು.
ಸಮಾರಂಭದಲ್ಲಿ ಸುಮಾರು 61 ಸಿಬ್ಬಂದಿಗಳಿಗೆ ಪದಕವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು. ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಮರ ಕುಮಾರ್ ಪಾಂಡೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಹಾಗೂ ಇತರರು ಉಪಸ್ಥಿತರಿದ್ದರು.
BIGG UPDATE : ‘ಪೋಕ್ಸೋ ಕೇಸ್’ : ‘ಮುರುಘಾ ಶ್ರೀ’ ಸೇರಿ ಮೂವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಧೃಡ…! |Murgha Sri