ಹಾಸನ : 40 ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್ ಒಂದು ಅಪಘಾತಕ್ಕೆ ಈಡಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಮಾನಸ ಗಂಗೋತ್ರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೇರಿ 40 ಮಂದಿ ಹೊರನಾಡಿಗೆ ಪ್ರವಾಸ ಹೊರಟ್ಟಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬೇಲೂರು ತಾಲೂಕಿನ ಬಳ್ಳೂರು-ಕೊನೇರಲು ಬಳಿ ಅಫಘಾತಕ್ಕೆ ಈಡಾಗಿದ್ದು, ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರಿಗೆ ಹಾಸನ ಜಿಲ್ಲಾಸ್ಪತ್ರೆ ಹಾಗೂ ಬೇಲೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
BREAKING NEWS : ‘ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ’ ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ
BIGG NEWS : ನಮೀಬಿಯಾದಿಂದ ಭಾರತಕ್ಕೆ ಬಂದ 8 ಆಫ್ರಿಕನ್ ಚೀತಾಗಳ ಪೈಕಿ 2 ಚೀತಾಗಳು ಮೊದಲ ಬಲಿ | African Cheetahs