ಬೆಂಗಳೂರು : ಅರ್ಧ ವರ್ಷ ಕಳೆದರೂ ಪಠ್ಯ ಪುಸ್ತಕ ನೀಡಲಾಗದ ಶಿಕ್ಷಣ ಸಚಿವರು ಧ್ಯಾನ ಮಾಡಿಸಲು ಮುಂದಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ ಕಾಂಗ್ರೆಸ್ ಓದಲು ಪುಸ್ತಕವಿಲ್ಲದಾಗ ವಿದ್ಯಾರ್ಥಿಗಳಿಗೆ ಧ್ಯಾನ, ಭಜನೆ ಮಾಡುವುದೊಂದೇ ದಾರಿ! ಪಠ್ಯಪುಸ್ತಕ, ಶೂ, ಸಾಕ್ಸ್, ಯುನಿಫಾರ್ಮ್ಗಳನ್ನು ನೀಡಲು ಯೋಗ್ಯತೆ ಇಲ್ಲದ @BCNagesh_bjp ಎಂಬ ಅಸಮರ್ಥ ಸಚಿವರ ಕೈಯ್ಯಲ್ಲಿ ಮಕ್ಕಳ ಭವಿಷ್ಯಕ್ಕೆ ಕತ್ತಲಾವರಿಸಿದೆ ಎಂದಿದೆ.ಶಾಲಾ ಮಕ್ಕಳಿಗೆ ಧ್ಯಾನ ಮಾಡಿಸಲು ಮುಂದಾದ ಸಚಿವರ ನಡೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಅರ್ಧ ವರ್ಷ ಕಳೆದರೂ ಪಠ್ಯ ಪುಸ್ತಕ ನೀಡಲಾಗದ ಶಿಕ್ಷಣ ಸಚಿವ ಧ್ಯಾನ ಮಾಡಿಸಲು ಮುಂದಾಗಿದ್ದಾರೆ!
ಓದಲು ಪುಸ್ತಕವಿಲ್ಲದಾಗ ವಿದ್ಯಾರ್ಥಿಗಳಿಗೆ ಧ್ಯಾನ, ಭಜನೆ ಮಾಡುವುದೊಂದೇ ದಾರಿ!
ಪಠ್ಯಪುಸ್ತಕ, ಶೂ, ಸಾಕ್ಸ್, ಯುನಿಫಾರ್ಮ್ಗಳನ್ನು ನೀಡಲು ಯೋಗ್ಯತೆ ಇಲ್ಲದ @BCNagesh_bjp ಎಂಬ ಅಸಮರ್ಥ ಸಚಿವರ ಕೈಯ್ಯಲ್ಲಿ ಮಕ್ಕಳ ಭವಿಷ್ಯಕ್ಕೆ ಕತ್ತಲಾವರಿಸಿದೆ. pic.twitter.com/dDnpd7uABK
— Karnataka Congress (@INCKarnataka) November 7, 2022
BIGG NEWS : 23.73 ಕೋಟಿ ರೂ. ವಂಚನೆ ಆರೋಪ : ‘Nexxoft Infotel’ ಕಂಪನಿ ನಿರ್ದೇಶಕರ ವಿರುದ್ಧ ದೂರು ದಾಖಲಿಸಿದ E.D