ನವದೆಹಲಿ: ನವೆಂಬರ್ 19 ರಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಸದಸ್ಯರು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಮುಂದಿನ ವಾರ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಲಿದೆ.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (ಎಐಬಿಇಎ) ಪ್ರಧಾನ ಕಾರ್ಯದರ್ಶಿಗಳು ತಮ್ಮ ಬೇಡಿಕೆಗಳನ್ನು ಬೆಂಬಲಿಸಿ 19.11.2022 ರಂದು ಮುಷ್ಕರ ನಡೆಸಲು ಉದ್ದೇಶಿಸಿದ್ದಾರೆ ಎಂದು ಭಾರತೀಯ ಬ್ಯಾಂಕ್ಗಳ ಸಂಘಕ್ಕೆ ನೋಟಿಸ್ ನೀಡಿದ್ದಾರೆ ಎಂದು ಬ್ಯಾಂಕ್ ಆಫ್ ಬರೋಡಾ ಸೋಮವಾರ ನಿಯಂತ್ರಕ ಫೈಲಿಂಗ್ನಲ್ಲಿ ತಿಳಿಸಿದೆ.
ಮುಷ್ಕರದ ದಿನಗಳಲ್ಲಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಬ್ಯಾಂಕ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ಮುಷ್ಕರವು ಕಾರ್ಯರೂಪಕ್ಕೆ ಬಂದರೆ, ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.
ಈ ನಡುವೆ ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೀಪಾವಳಿ ವಾರದಲ್ಲಿ ಚಲಾವಣೆಯಲ್ಲಿದ್ದ ಕರೆನ್ಸಿ ಇಳಿಕೆಯಾಗಿದೆ. ತಂತ್ರಜ್ಞಾನದಲ್ಲಿನ ಆವಿಷ್ಕಾರಗಳು ಭಾರತೀಯ ಪಾವತಿ ವ್ಯವಸ್ಥೆಯನ್ನು ಬದಲಾಯಿಸಿವೆ ಎಂದು ಎಸ್ಬಿಐ ರಿಸರ್ಚ್ ತನ್ನ ವರದಿ ಇಕೋವ್ರಾಪ್ನಲ್ಲಿ ತಿಳಿಸಿದೆ. ಡಿಜಿಟಲ್ ವಹಿವಾಟುಗಳಲ್ಲಿನ ಬೆಳವಣಿಗೆಯೇ ಇದಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.