ನವದೆಹಲಿ: 200 ಕೋಟಿ ರೂ. ವಂಚನೆ ಪ್ರಕರಣದಿಂದ ಜೈಲು ಪಾಲಾಗಿರುವ ಸುಖೇಶ್ ಚಂದ್ರಶೇಖರ್ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾನೆ. ʻಮಂಡೋಲಾ ಜೈಲಿನಲ್ಲಿ ಸಿಆರ್ಪಿಎಫ್ ಸಿಬ್ಬಂದಿ ನನ್ನ ಮೇಲೆ ನಡೆಸಿದ್ದು, ನನ್ನ ಖಾಸಗಿ ಭಾಗಕ್ಕೆ ಗಾಯವಾಗಿದೆ ಎಂದು ಆರೋಪ ಮಾಡಿದ್ದಾನೆ.
ಅಷ್ಟೇ ಅಲ್ದೇ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧದ ದೂರನ್ನು ಹಿಂತೆಗೆದುಕೊಳ್ಳುವಂತೆ ನಿರಂತರ ಬೆದರಿಕೆ ಬರುತ್ತಿದೆ. ನನ್ನ ಜೀವಕ್ಕೆ ಅಪಾಯವಿದೆ.
ತನ್ನನ್ನು ಮತ್ತು ತನ್ನ ಪತ್ನಿಯನ್ನು ದೆಹಲಿಯಿಂದ ಬೇರೆ ಯಾವುದಾದರೂ ಜೈಲಿಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾನೆ.
ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ಗುರು ತೇಗ್ ಬಹದ್ದೂರ್ ಆಸ್ಪತ್ರೆಯಲ್ಲಿ ತಮ್ಮ ಕಕ್ಷಿದಾರರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಂದ್ರಶೇಖರ್ ಪರ ವಕೀಲರು ತಿಳಿಸಿದ್ದಾರೆ. ನೋವು ಕಡಿಮೆ ಮಾಡಲು ಸ್ಕ್ರೋಟಲ್ ಸಪೋರ್ಟ್ ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಈ ಹಿಂದಿನ ಪತ್ರಗಳಲ್ಲಿ, ರಾಜ್ಯಸಭೆಗೆ ನಾಮನಿರ್ದೇಶನ ಮಾಡುವುದಾಗಿ ಪಕ್ಷವು ಭರವಸೆ ನೀಡಿದ್ದರಿಂದ ತಾನು ಎಎಪಿಗೆ 50 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನೀಡಿದ್ದೇನೆ ಎಂದು ಆರೋಪಿ ಚಂದ್ರಶೇಖರ್ ಹೇಳಿದ್ದಾನೆ.
ಅರವಿಂದ್ ಕೇಜ್ರಿವಾಲ್ ಅವರ ಪಕ್ಷಕ್ಕೆ 500 ಕೋಟಿ ದೇಣಿಗೆ ನೀಡಲು 20 ಕ್ಕೂ ಹೆಚ್ಚು ಜನರನ್ನು ಕರೆತರುವಂತೆ ಒತ್ತಾಯಿಸಲಾಗಿದೆ ಎಂದು ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದಾರೆ. ತಿಹಾರ್ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ 2019 ರಲ್ಲಿ ಜೈಲಿನಲ್ಲಿ ತನ್ನ “ಸುರಕ್ಷತೆ” ಗಾಗಿ 10 ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾರೆ ಎಂದು ಕಾನ್ಮ್ಯಾನ್ ಚಂದ್ರಶೇಖರ್ ಆರೋಪಿಸಿದ್ದನು. ಚಂದ್ರಶೇಖರ್ ಅವರ ಆರೋಪಗಳನ್ನು ಅನುಸರಿಸಿ ಬಿಜೆಪಿಯು ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಕೇಸರಿ ಪಕ್ಷವು ಎಎಪಿ ರಾಷ್ಟ್ರೀಯ ಸಂಚಾಲಕರನ್ನು “ಮಹಾ ಥಗ್” ಎಂದು ಕರೆಯಿತು ಮತ್ತು ಅವರ ರಾಜೀನಾಮೆಗೆ ಒತ್ತಾಯಿಸಿತು.
BREAKING NEWS: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45 ಸ್ಥಳಗಳಲ್ಲಿ ಎನ್ಐಎ ದಾಳಿ | NIA raids
BREAKING NEWS: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45 ಸ್ಥಳಗಳಲ್ಲಿ ಎನ್ಐಎ ದಾಳಿ | NIA raids