ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದೀಗ ಬಸವರಾಜನ್ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹತ್ತು ದಿನಗಳ ಕಾಲ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು, ಆದರೆ ಕೋರ್ಟ್ 4 ದಿನಗಳ ಕಾಲ ಬಸವರಾಜನ್ ಅವರನ್ನು ಪೊಲೀಸ್ ವಶಕ್ಕೆ ನೀಡಿ ಚಿತ್ರದುರ್ಗದ 1 ನೇ ಹೆಚ್ಚುವರಿ ಕೋರ್ಟ್ ಆದೇಶಿಸಿದೆ.
ಮುರುಘಾಮಠದಲ್ಲಿದ್ದ 47 ಫೋಟೋ ಕಳ್ಳತನಕ್ಕೆ ನೀಡಿದ ಆರೋಪದ ಮೇಲೆ ಎಸ್.ಕೆ. ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. .ಮುರುಘಾ ಮಠದಲ್ಲಿದ್ದ 47 ಫೋಟೋಗಳ ಕಳ್ಳತನ ಆರೋಪದಲ್ಲಿ ನವೆಂಬರ್ 7 ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್ ಮೂರ್ತಿ ಅಲಿಯಾಸ್ ಸ್ವಾಮಿ ಹಾಗೂ ಎಸ್ ಜೆಎಂ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಅವರನ್ನು ಬಂಧಿಸಲಾಗಿತ್ತು. ಇವರು ನೀಡಿದ ಮಾಹಿತಿ ಮೇರೆಗೆ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಸರ್ಕಾರದ ದುಡ್ಡಲ್ಲಿ ‘ಕೆಂಪೇಗೌಡ ಪ್ರತಿಮೆ’ ನಿರ್ಮಾಣ ಮಾಡಿದ್ದೇ ದೊಡ್ಡ ಅಪರಾಧ : ಡಿ.ಕೆ ಶಿವಕುಮಾರ್ |D.K Shivakumar