ರಾಜಸ್ಥಾನ: ರಾಜಸ್ಥಾನದ ಉದಯಪುರದ ಗೋಗುಂಡಾದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಉದಯಪುರ ಜಿಲ್ಲೆಯ ಗೋಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಾಲ್ವರು ಮಕ್ಕಳು ಸೇರಿದಂತೆ ಪತಿ-ಪತ್ನಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.
ಮೃತರನ್ನು ಪ್ರಕಾಶ್ (40), ದುರ್ಗಾ (35), ಗಣೇಶ್ (5 ), ಪುಷ್ಕರ್ (4 ), ರೋಷನ್ (2 ) ಎಂದು ಗುರುತಿಸಲಾಗಿದೆ. ಮೂವರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನೂ, ಮಹಿಳೆ ತನ್ನ ನಾಲ್ಕು ತಿಂಗಳ ಮಗುವಿನೊಂದಿಗೆ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದಾಳೆ.
ಮಾಹಿತಿ ಪ್ರಕಾರ, ಮೂರು ತಿಂಗಳ ಹಿಂದೆ ಗುಜರಾತ್ನ ಸೂರತ್ನಿಂದ ಪ್ರಕಾಶ್ ವಾಪಸಾಗಿದ್ದರು. ಅಡುಗೆ ಮನೆಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಪ್ರಕಾಶ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಇದರಿಂದಾಗಿ ಅವರು ಕೆಲಸಕ್ಕೆ ಮರಳಲಿಲ್ಲ. ಹಣಕಾಸಿನ ತೊಂದರೆಯಿಂದ ಪ್ರಕಾಶ್ ಮಕ್ಕಳಿಗೆ ನೇಣು ಬಿಗಿದು ನಂತರ ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
BIGG NEWS : ರಾಜ್ಯದಲ್ಲಿ ಮತ್ತೊಂದು `ಲವ್ ಜಿಹಾದ್’ ಆರೋಪ ಪ್ರಕರಣ : ನೊಂದ ಯುವತಿಯಿಂದ ಪೊಲೀಸ್ ಠಾಣೆಗೆ ದೂರು
ನಾವು ತಿನ್ನೋ ಆಹಾರದಿಂದಲೂ ʻಹೊಟ್ಟೆ ಕ್ಯಾನ್ಸರ್ʼ ಅಭಿವೃದ್ಧಿ: ಸಂಶೋಧನೆಯಿಂದ ಬಯಲಾದ ಸತ್ಯಾಂಶ ಇಲ್ಲಿದೆ
BIGG NEWS : ರಾಜ್ಯದಲ್ಲಿ ಮತ್ತೊಂದು `ಲವ್ ಜಿಹಾದ್’ ಆರೋಪ ಪ್ರಕರಣ : ನೊಂದ ಯುವತಿಯಿಂದ ಪೊಲೀಸ್ ಠಾಣೆಗೆ ದೂರು