ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನ ಹಾಲಿನ ದರವನ್ನು 3 ರೂ. ಬದಲಾಗಿ 2 ರೂ.ಗೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನುಕೂಲವಾಗುವಂತೆ ಸೂತ್ರವೊಂದನ್ನು ಎರಡು ದಿನದೊಳಗೆ ರೂಪಿಸಿಕೊಂಡು ಬರುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹಾಲು ಮಹಾಮಂಡಲಕ್ಕೆ ಸೂಚನೆ ನೀಡಿದ್ದು, ಈ ಮೂಲಕ ನಂದಿನಿ ಹಾಲಿನ ದರ ಹೆಚ್ಚಳ ವಿಚಾರ ಎರಡು ದಿನ ಮುಂದೂಡಿಕೆ ಕಂಡಿದೆ.
ಕೆಎಂಎಫ್ ನವೆಂಬರ್ 23 ರಂದು ಸಭೆ ನಡೆಸಲಿದ್ದು, ಆ ಸಭೆಯಲ್ಲಿ ತಾವು ಹಾಲಿ ನಿರ್ಧರಿಸುವಂತೆ ಹಾಲು ಹಾಗೂ ಮೊಸರಿನ ದರವನ್ನು 3 ರೂ. ಹೆಚ್ಚಳಕ್ಕೆ ಬದಲಾಗಿ 2 ರೂ.ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.