ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಜನರಿಗೆ ಭಾರೀ ಉಪಟಳ ನೀಡುತ್ತಿದ್ದ ಮೂರು ಆನೆ ಕಾಡಾನೆಗಳ ಪೈಕಿ ಒಂದು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.
ಕೆಲವು ದಿನಗಳ ಹಿಂದೆ ಕಾಡಾನೆ ದಾಳಿಗೆ ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಮೃತಪಟ್ಟಿದ್ದರು. ಘಟನೆ ಗ್ರಾಮದ ಜನರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಆದೇಶ ಹೊರಡಿಸಿತ್ತು. ಇದೀಗ ಮೂರು ಆನೆ ಕಾಡಾನೆಗಳ ಪೈಕಿ ಒಂದು ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.
ಮೂಡಿಗೆರೆಯಲ್ಲಿ ಕಾಡಾನೆ ದಾಳಿ ಉಪಟಳ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ಇತ್ತೀಚೆಗೆ ಶೋಭಾ ಎಂಬ ಮಹಿಳೆ ಮೃತಪಟ್ಟ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು, ಈ ಹಿನ್ನಲೆ ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ಸರ್ಕಾರ ಮಹತ್ವದ ಆದೇಶ ಹೊರಡಿಸಿ, ತೊಂದರೆ ನೀಡುತ್ತಿರುವ 3 ಕಾಡಾನೆ ಸೆರೆ ಹಿಡಿಯಲು ಸೂಚನೆ ನೀಡಿತ್ತು. ಮೂರು ಆನೆಗಳನ್ನು ಹಿಡಿಯಲು ಸರ್ಕಾರ ಆದೇಶಿಸಿದ್ದು, ನಂತರ ಅದನ್ನು ಸುರಕ್ಷಿತ ಅರಣ್ಯಕ್ಕೆ ಬಿಡಲು ಸೂಚನೆ ನೀಡಲಾಗಿತ್ತು.
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ತೀವ್ರ ಆಕ್ರೋಶಕ್ಕೆ ಗುರಿಯಾಗಿತ್ತು. ಅಲ್ಲದೇ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಿ ಬಟ್ಟೆಯನ್ನು ಹರಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರನ್ನು ಹಿಡಿದು ಎಳೆದಾಡಿದ್ದಾರೆ ಎನ್ನಲಾಗಿತ್ತು.
ಸಾಂದರ್ಭಿಕ ಚಿತ್ರ
BIG NEWS: ‘KSRTC ನೂತನ ಬಸ್’ಗಳಿಗೆ ಹೆಸರು, ಟ್ಯಾಗ್ ಲೈನ್, ಗ್ರಾಫಿಕ್ಸ್ ನೀಡಿ ‘25 ಸಾವಿರ’ದವರೆಗೆ ಬಹುಮಾನ ಗೆಲ್ಲಿ