ದಾವಣಗೆರೆ: ಜಿಲ್ಲೆಯ ಹರಿಯರ ತಾಲೂಕಿನ ಮಲೇಬೆನ್ನೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣದಿಂದಾಗಿ ಯುವಕರಿಬ್ಬರ ನಡುವೆ ಗಲಾಟೆಯಾಗಿದೆ.
ಈ ಘಟನೆಯಲ್ಲಿ ಓರ್ವನಿಗೆ ಚಾಕು ಇರಿದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಕೋಮಿನ ಈತನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಕಳೆದ ದಿನ ಮಲೇಬೆನ್ನೂರು ಗ್ರಾಮದ ಜಿಗಳಿ ಸರ್ಕಲ್ ನಲ್ಲಿರುವ ಸಾಯಿ ಬೇಕರಿ ಬಳಿ ಈ ಘಟನೆ
ನಡೆದಿದೆ.ಹಲ್ಲೆಗೊಳಗಾದ ಯುವಕನನ್ನು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಜಿಲ್ಲಾಸ್ಪತ್ರೆಗೆ ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಹಲ್ಲೆಗೊಳಗಾದ ಯುವಕ ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.