ಬೆಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ಹಾಗೂ ವಿಶೇಷ ಪೊಲೀಸ್ ದಳ ರಚನೆಗೆ ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.
BIGG NEWS: ಬೆಂಗಳೂರಿನಲ್ಲಿ ತಾಪಮಾನ ಏರುಪೇರು; ಜನರಿಗೆ ಸೋಂಕಿನ ಬಗ್ಗೆ ವೈದ್ಯರ ಎಚ್ಚರಿಕೆ
ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು, ವಿಶೇಷ ಪೊಲೀಸ್ ದಳ ರಚನೆ ಮಾಡಬೇಕು ಎಂದು ಆಗ್ರಹಿಸಿ ಇಂದು ಹಿಂದೂ ಸಂಘಟನೆಗಳು ಗೃಹ ಸಚಿವ ಅರಗಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ರಚನೆ ಮಾಡುವಂತೆ ಡಿಸೆಂಬರ್ 18 ರವರೆಗೆ ಹಿಂದೂಪರ ಸಂಘಟನೆಗಳಾದ ಹಿಂದೂ ಜನಜಾಗೃತಿ ವೇದಿಕೆ, ರಣರಾಗಿಣಿ ಬಿಗ್ರೇಡ್ ಸೇರಿದಂತೆ ಹಲವು ಸಂಘಟನೆಗಳು ರಾಜ್ಯದ ಸಚಿವರು, ಎಲ್ಲ ಬಿಜೆಪಿ ಶಾಸಕರಿಗೆ ಮನವಿ ಸಲ್ಲಿಸುವ ಅಭಿಯಾನ ಹಮ್ಮಿಕೊಂಡಿವೆ.
ಗೃಹ ಸಚಿವ ಅರಗಜ್ಞಾನೇಂದ್ರ ಅವರನ್ನು ಭೇಟಿ ಬಳಿಕ ಮಾತನಾಡಿದ ಹಿಂದು ಜನಜಾಗೃತಿ ರಾಜ್ಯ ಸಂಚಾಲಕ ಮೋಹನ್ ಗೌಡ, ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಪ್ರತ್ಯೇಕ ಕಾನೂನು ಜಾರಿ ಮಾಡಬೇಕು. ಜೊತೆಗೆ ವಿಶೇಷ ಪೊಲೀಸ್ ದಳ ರಚನೆ ಮಾಡಬೇಕು. ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿ ಆಗಬೇಕು. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಗೂ ಮನವಿ ಮಾಡುತ್ತೇವೆ. ನಾಳೆಯಿಂದ ಎಲ್ಲ ಸಚಿವರು, ಎಲ್ಲಾ ಬಿಜೆಪಿ ಶಾಸಕರಿಗೆ ಮನವಿ ಮಾಡುತ್ತೇವೆ ಎಂದರು.