ನವದೆಹಲಿ:ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕ್ರಮವಾಗಿ ಬಿಜೆಪಿ ಮತ್ತು ಕಾಂಗ್ರೆಸ್ಗೆ ದೊಡ್ಡ ಗೆಲುವು ಸಾಧಿಸಿದ ನಂತರ, ಎರಡೂ ಪಕ್ಷಗಳು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಛಾಪು ಮೂಡಿಸಲು ಪ್ರಯತ್ನಿಸುತ್ತಿವೆ, ಇದು 2023 ರ ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದೆ. ಈ ನಡುವೆ ಈ ಎರಡು ಪಕ್ಷಗಳಲ್ಲದೆ, ಜೆಡಿಎಸ್ ಕೂಡ ರಾಜ್ಯದಲ್ಲಿ ಗೆಲುವಿನ ಗುರಿಯನ್ನು ಹೊಂದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತಮ್ಮ ಪಕ್ಷವು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುತ್ತದೆ ಹೇಳಿದರು. ಇದೇ ವೇಳೆ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಜೆಡಿಎಸ್ ಮಾತ್ರ ಪರ್ಯಾಯವಾಗಿದೆ. ಕಾಂಗ್ರೆಸ್ನಲ್ಲಿ ಒಳಜಗಳವಿದೆ ಮತ್ತು ಜನರು ಬಿಜೆಪಿಯಿಂದ ಬೇಸತ್ತಿದ್ದಾರೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಮ್ಯಾಜಿಕ್ ಇಲ್ಲಿ ಕೆಲಸ ಮಾಡುವುದಿಲ್ಲ. ಜನರು ಈಗಾಗಲೇ ಮನಸ್ಸು ಮಾಡಿದ್ದಾರೆ, ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್ ಭಾರಿ ಅಂತರದಿಂದ ಗೆಲ್ಲುತ್ತದೆ ಅಂತ ತಿಳಿಸಿದ್ದಾರೆ.