ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮತ್ತೆ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ.
BIG NEWS: ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಿದೆ ಕೇಂದ್ರ ಸರ್ಕಾರ?
ಸಿಎಂ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಅಂದೇ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ.
ವಿಧಾನಸಭೇ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಕೈಬಿಡಲಾಗಿದ್ದ ನಾಯಕರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
WATCH VIDEO: ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿ’: ಮಧ್ಯಪ್ರದೇಶ ಕೈ ನಾಯಕನಿಂದ ವಿವಾದತ್ಮಕ ಹೇಳಿಕೆ