ಹಾವೇರಿ : ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಸ್ಪರ್ಧೆ ನಡೆಯುತ್ತಿದ್ದ ವೇಳೆ ಕೊಬ್ಬರಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 10 ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ
ಮಂಜುನಾಥ್ ಸಂಗೂರು ಗ್ರಾಮದ ನಿವಾಸಿ ಮಂಜುನಾಥ್ ಚಳ್ಳಕ್ಕನವರ (27) ಎಂಬವರಿಗೆ ಹೊಟ್ಟೆಯ ಎಡಭಾಗಕ್ಕೆ ಹೋರಿ ತಿವಿದು ಮೃತಪಟ್ಟಿದ್ದನು. ಯುವಕನ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೋರಿ ಹಬ್ಬವನ್ನು ನೋಡುತ್ತಿದ್ದ ವೇಳೆ ಹೋರಿ ತಿವಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯಲ್ಲಿ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಗಿನೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.