ಮಂಗಳೂರು: ನಗರದಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳಿಂದ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿ ಶಾರಿಕ್ ನ ವಿಚಾರಣೆ ನಡೆಯುತ್ತಿದೆ.
BIGG NEWS: ಹೊಸ ವರ್ಷಕ್ಕೆ ಮಧ್ಯರಾತ್ರಿ 3 ಗಂಟೆವರೆಗೂ ಹೋಟೆಲ್ ತೆರೆಯಲು ಅನುಮತಿ; ಪೊಲೀಸ್ ಇಲಾಖೆಗೆ ಮನವಿ
ಈ ಪ್ರಕರಣದಲ್ಲಿ ಗಾಯಾವಾಗಿದ್ದ ಶಾರಿಕ್ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಬಹುತೇಕ ಚೇತರಿಸಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್ಐಎ ತಂಡ ಆತನನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದೆ.ಕುಕ್ಕರ್ ಬಾಂಬ್ ಸ್ಫೋಟಗೊಂಡ ಪರಿಣಾಮ ಶಾರಿಕ್ ದೇಹದಲ್ಲಿ ಶೇ.45ರಷ್ಟು ಸುಟ್ಟ ಗಾಯಗಳಾಗಿತ್ತು. ಅಲ್ಲದೆ ಶ್ವಾಸಕೋಶದೊಳಗೆ ರಾಸಾಯನಿಕಯುಕ್ತ ಹೊಗೆ ಕೂಡ ಸೇರಿದ್ದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಘಟನೆಯಲ್ಲಿ ಗಾಯಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ.