ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಸಾರ್ವಜನಿಕ ಕೆಲಸದಲ್ಲಿ ವಿಳಂಬ ಆರೋಪದ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಹೆಚ್ಚೆಚ್ಚು ದೂರು ಬಂದ ಹಿನ್ನಲೆಯಲ್ಲಿ ಇಂದು ಚಾಮರಾಜನಗರ ಲೋಕಾಯುಕ್ತ ಡಿವೈಸ್ಪಿ ಕೊಳ್ಳೆಗಾಲ ನಗರಸಬೆಗೆ ದಿಡೀರ್ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಸ್ಪಿ ಒಡೆಯರ್, ಇನ್ಸ್ ಪೆಕ್ಟರ್ ಗಳಾದ ರವಿಕುಮಾರ್ ಶಶಿಕುಮಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ಯಲ್ಲಿ ಭಾಗಿಯಾಗಿದ್ದಾರೆ. ಸಾರ್ವಜನಿಕ ಕೆಲಸ ಕಾರ್ಯದಲ್ಲಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಕಡತಗಳನ್ನ ಪರಿಶೀಲನೆ ಮಾಡಿ ಮುಂದಿನ ಕ್ರಮ ವಹಿಸಲು ಅಗತ್ಯ ಕ್ರಮಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.