Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು.? ಶಾಸ್ತ್ರ ಹೇಳೋದೇನು?

12/07/2025 8:30 PM

ವಿದೇಶದಲ್ಲಿ ಹೃದಯಾಘಾತಕ್ಕೆ ಧಾರವಾಡದ ವೃದ್ಧೆ ಬಲಿ

12/07/2025 8:14 PM

ಭಾರತದಲ್ಲಿ ‘X’ ಚಂದಾದಾರಿಕೆ ಬೆಲೆ ಇಳಿಕೆ, ಈಗ 170 ರೂ.ಗಳಿಂದ ಪ್ರಾರಂಭ : ‘ಬ್ಲೂ ಟಿಕ್’ ಬೆಲೆ ಎಷ್ಟು ಗೊತ್ತಾ?

12/07/2025 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರಣ್ಯ ಇಲಾಖೆಗೆ ಕೆಕೆಆರ್ ಡಿಬಿಯಿಂದ 30 ಕೋಟಿ ಅನುದಾನ ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಅರಣ್ಯ ಇಲಾಖೆಗೆ ಕೆಕೆಆರ್ ಡಿಬಿಯಿಂದ 30 ಕೋಟಿ ಅನುದಾನ ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0906/01/2024 1:27 PM

ಕಲಬುರ್ಗಿ: ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ‌ ಬಿಡುಗಡೆ ಮಾಡಲಾಗುತ್ತಿದ್ದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಈ ಅನುದಾನ ಬಳಸಿಕೊಳ್ಳಬೇಕು. ಇದಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಮಾನ್ಯ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದ ಸಚಿವರು ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ ಎಂದು ಕಾಳಜಿ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮಾನವ ಹಾಗೂ ವನ್ಯಜೀವಿ ಗಳ ಸಂಘರ್ಷ ನಿಲ್ಲಬೇಕು ಎನ್ನುವುದು ಎಲ್ಲರ ಕೂಗು. ಆದರೆ, ನಿಮಗೆ ಸರಿಯಾದ ಸೌಕರ್ಯ ಕೊಟ್ಟಾಗ ಮಾತ್ರ ಸಂಘರ್ಷ ತಡೆಯಲು ಅನುಕೂಲವಾಗುತ್ತದೆ‌. ಹಾಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲು ಬದ್ಧ ಎಂದರು.

ಸುಮಾರು 2 ದಶಕಗಳ ನಂತರ ಕಲಬುರಗಿ ಯಲ್ಲಿ ಕ್ರೀಡಾ ಕೂಟ ನಡೆಯುತ್ತಿದೆ. ರಾಜ್ಯದ 13 ವೃತ್ತಗಳಿಂದ 1200 ಕ್ಕೂ ಸ್ಪರ್ಧಾಳುಗಳು ಭಾಗಿಯಾಗಿ, ಒಟ್ಟು 271 ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ ಅವರಿಗೆ ನನ್ನ ಶುಭಾಶಯಗಳು ಎಂದರು.

ವೇದಿಕೆಯ ಮೇಲೆ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಆರ್ ಚೇತನ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸುದರ್ಶನ್, ಬ್ರಿಜೇಶ್ ಕುಮಾರ, ಬಿಶ್ವಜಿತ್ ಮಿಶ್ರಾ, ಶಾಶ್ವತಿ ಮಿಶ್ರ ಸೇರಿದಂತೆ ಹಲವರಿದ್ದರು.

ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ

BREAKING:ಗಣರಾಜ್ಯೋತ್ಸವಕ್ಕೆ ಬ್ರ್ಯಾಂಡ್​ ಬೆಂಗಳೂರು ಸ್ತಬ್ಧಚಿತ್ರ ಆಯ್ಕೆ

Share. Facebook Twitter LinkedIn WhatsApp Email

Related Posts

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು.? ಶಾಸ್ತ್ರ ಹೇಳೋದೇನು?

12/07/2025 8:30 PM2 Mins Read

ವಿದೇಶದಲ್ಲಿ ಹೃದಯಾಘಾತಕ್ಕೆ ಧಾರವಾಡದ ವೃದ್ಧೆ ಬಲಿ

12/07/2025 8:14 PM1 Min Read

3 ತಿಂಗಳಲ್ಲಿ ಹೊಸ ಸಮಿತಿ ರಚನೆಗೆ ಕೋರ್ಟ್ ಆದೇಶ: ಸಾಗರ ಮಾರಿಕಾಂಬ ಹಿತರಕ್ಷಣಾ ಸಮಿತಿ ಸಂಚಾಲಕ ಆನಂದ್

12/07/2025 8:08 PM2 Mins Read
Recent News

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು.? ಶಾಸ್ತ್ರ ಹೇಳೋದೇನು?

12/07/2025 8:30 PM

ವಿದೇಶದಲ್ಲಿ ಹೃದಯಾಘಾತಕ್ಕೆ ಧಾರವಾಡದ ವೃದ್ಧೆ ಬಲಿ

12/07/2025 8:14 PM

ಭಾರತದಲ್ಲಿ ‘X’ ಚಂದಾದಾರಿಕೆ ಬೆಲೆ ಇಳಿಕೆ, ಈಗ 170 ರೂ.ಗಳಿಂದ ಪ್ರಾರಂಭ : ‘ಬ್ಲೂ ಟಿಕ್’ ಬೆಲೆ ಎಷ್ಟು ಗೊತ್ತಾ?

12/07/2025 8:09 PM

3 ತಿಂಗಳಲ್ಲಿ ಹೊಸ ಸಮಿತಿ ರಚನೆಗೆ ಕೋರ್ಟ್ ಆದೇಶ: ಸಾಗರ ಮಾರಿಕಾಂಬ ಹಿತರಕ್ಷಣಾ ಸಮಿತಿ ಸಂಚಾಲಕ ಆನಂದ್

12/07/2025 8:08 PM
State News
KARNATAKA

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು.? ಶಾಸ್ತ್ರ ಹೇಳೋದೇನು?

By kannadanewsnow0912/07/2025 8:30 PM KARNATAKA 2 Mins Read

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ?. ಶಾಸ್ತ್ರಾನುಸಾರ ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ|…

ವಿದೇಶದಲ್ಲಿ ಹೃದಯಾಘಾತಕ್ಕೆ ಧಾರವಾಡದ ವೃದ್ಧೆ ಬಲಿ

12/07/2025 8:14 PM

3 ತಿಂಗಳಲ್ಲಿ ಹೊಸ ಸಮಿತಿ ರಚನೆಗೆ ಕೋರ್ಟ್ ಆದೇಶ: ಸಾಗರ ಮಾರಿಕಾಂಬ ಹಿತರಕ್ಷಣಾ ಸಮಿತಿ ಸಂಚಾಲಕ ಆನಂದ್

12/07/2025 8:08 PM

ಸಿಗಂದೂರು ಚೌಡೇಶ್ವರಿ ಕೇಬಲ್ ಸೇತುವೆ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಕೆ: ಸಂಸದ ಬಿವೈ ರಾಘವೇಂದ್ರ

12/07/2025 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.