Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಐಪಿಎಲ್ 2026ರಲ್ಲಿ ಮಳೆ ಕಾಟ: ಲೀಗ್ ಹಂತದ ಪಂದ್ಯಗಳಿಗೆ ‘ರಿಸರ್ವ್ ಡೇ’ ಇಲ್ಲ; ಪಂದ್ಯ ರದ್ದಾದರೆ ಪಾಯಿಂಟ್ಸ್ ಹಂಚಿಕೆ ಹೇಗೆ?

01/04/2026 6:56 AM

ಭಾರತದ ಆರ್ಥಿಕತೆಗೆ ‘ಇರಾನ್ ಯುದ್ಧ’ದ ಪೆಟ್ಟು: ಜಿಡಿಪಿ (GDP) ಬೆಳವಣಿಗೆಯಲ್ಲಿ ಶೇ. 1ರಷ್ಟು ಕುಸಿತದ ಭೀತಿ; EY ಎಚ್ಚರಿಕೆ!

01/04/2026 6:52 AM

ದೆಹಲಿ ವಿಮಾನದಲ್ಲಿ ‘ಹೊಗೆ’ಯ ಆತಂಕ: ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್; ಕೂದಲೆಳೆ ಅಂತರದಲ್ಲಿ ಪಾರಾದ ನೂರಾರು ಪ್ರಯಾಣಿಕರು!

01/04/2026 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ
KARNATAKA

ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ

By kannadanewsnow0710/01/2024 5:00 AM

ಕೊಡಗು: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.
ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಲನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಹಳೆ ಶಾಲೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಾಗ್ರಿಗಳನ್ನು ವಿತರಿಸಲಾಗುವುದು ಎಂದರು. ಹೊಸ ತಾಲ್ಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಕುಂದುಕೊರತೆ ಸಂಬಂಧಿಸಿದಂತೆ ಅಹವಾಲು ಆಲಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಹಾಕಿ ಕ್ರೀಡೆಯು ಕೊಡಗು ಜಿಲ್ಲೆಯ ಸಂಸ್ಕøತಿಯ ಭಾಗವಾಗಿದೆ ಎಂದರು. ಪೊನ್ನಂಪೇಟೆ ಹಾಕಿ ಕ್ರೀಡಾಂಗಣಕ್ಕೆ ಇನ್ನಷ್ಟು ಮೂಲ ಸೌಲಭ್ಯ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುವುದು. ಜಿಲ್ಲೆಯ ಹಾಕಿ ಕ್ರೀಡಾ ಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಆಟದ ಮೈದಾನಗಳನ್ನು ಗುರುತಿಸಲಾಗಿದ್ದು, ಸ್ಥಳೀಯ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದರು.

'Ragi Malt' to be distributed to students from next month; Madhu Bangarappa ಮುಂದಿನ ತಿಂಗಳಿಂದ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಕ್ರಮ; ಮಧು ಬಂಗಾರಪ್ಪ
Share. Facebook Twitter LinkedIn WhatsApp Email

Related Posts

ALERT : ಬಿಸಿಲಿನಲ್ಲಿ ಖಾಲಿ ಹೊಟ್ಟೆಯಲ್ಲಿ ಹೊರಗೆ ಹೋಗುತ್ತಿದ್ದೀರಾ? ಜಾಗ್ರತೆ, ಇದು ಪ್ರಾಣಕ್ಕೆ ಕುತ್ತು ತರಬಹುದು!

01/04/2026 6:30 AM2 Mins Read

April Fools : ಏನಿದು ‘ಏಪ್ರಿಲ್ ಫೂಲ್ಸ್ ಡೇ’? ಇದರ ಇತಿಹಾಸ, ಮಹತ್ವವೇನು ತಿಳಿಯಿರಿ

01/04/2026 6:15 AM2 Mins Read

ಕರ್ನಾಟಕದಲ್ಲಿ ಇಂದಿನಿಂದ ಜನಗಣತಿ ಆರಂಭ : ಜನರು ಸಕ್ರಿಯವಾಗಿ ಪಾಲ್ಗೊಳ್ಳಲು ರಾಜ್ಯಪಾಲ, CM ಸಿದ್ದರಾಮಯ್ಯ ಕರೆ

01/04/2026 6:14 AM2 Mins Read
Recent News

ಐಪಿಎಲ್ 2026ರಲ್ಲಿ ಮಳೆ ಕಾಟ: ಲೀಗ್ ಹಂತದ ಪಂದ್ಯಗಳಿಗೆ ‘ರಿಸರ್ವ್ ಡೇ’ ಇಲ್ಲ; ಪಂದ್ಯ ರದ್ದಾದರೆ ಪಾಯಿಂಟ್ಸ್ ಹಂಚಿಕೆ ಹೇಗೆ?

01/04/2026 6:56 AM

ಭಾರತದ ಆರ್ಥಿಕತೆಗೆ ‘ಇರಾನ್ ಯುದ್ಧ’ದ ಪೆಟ್ಟು: ಜಿಡಿಪಿ (GDP) ಬೆಳವಣಿಗೆಯಲ್ಲಿ ಶೇ. 1ರಷ್ಟು ಕುಸಿತದ ಭೀತಿ; EY ಎಚ್ಚರಿಕೆ!

01/04/2026 6:52 AM

ದೆಹಲಿ ವಿಮಾನದಲ್ಲಿ ‘ಹೊಗೆ’ಯ ಆತಂಕ: ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್; ಕೂದಲೆಳೆ ಅಂತರದಲ್ಲಿ ಪಾರಾದ ನೂರಾರು ಪ್ರಯಾಣಿಕರು!

01/04/2026 6:44 AM

ಪಶ್ಚಿಮ ಏಷ್ಯಾ ಯುದ್ಧದ ಕಿಚ್ಚು ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ: ಮೋದಿ ರಾಹುಲ್ ಗಾಂಧಿ ಪರಸ್ಪರ ವಾಗ್ದಾಳಿ!

01/04/2026 6:41 AM
State News
KARNATAKA

ALERT : ಬಿಸಿಲಿನಲ್ಲಿ ಖಾಲಿ ಹೊಟ್ಟೆಯಲ್ಲಿ ಹೊರಗೆ ಹೋಗುತ್ತಿದ್ದೀರಾ? ಜಾಗ್ರತೆ, ಇದು ಪ್ರಾಣಕ್ಕೆ ಕುತ್ತು ತರಬಹುದು!

By kannadanewsnow5701/04/2026 6:30 AM KARNATAKA 2 Mins Read

ದೇಶಾದ್ಯಂತ ಬೇಸಿಗೆಯ ತಾಪಮಾನ ಏರುತ್ತಲೇ ಇದೆ. ಸುಡುವ ಬಿಸಿಲಿಗೆ ಜನ ತತ್ತರಿಸಿ ಹೋಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೇವಲ ಬಿಸಿಲಿನಿಂದ ರಕ್ಷಣೆ…

April Fools : ಏನಿದು ‘ಏಪ್ರಿಲ್ ಫೂಲ್ಸ್ ಡೇ’? ಇದರ ಇತಿಹಾಸ, ಮಹತ್ವವೇನು ತಿಳಿಯಿರಿ

01/04/2026 6:15 AM

ಕರ್ನಾಟಕದಲ್ಲಿ ಇಂದಿನಿಂದ ಜನಗಣತಿ ಆರಂಭ : ಜನರು ಸಕ್ರಿಯವಾಗಿ ಪಾಲ್ಗೊಳ್ಳಲು ರಾಜ್ಯಪಾಲ, CM ಸಿದ್ದರಾಮಯ್ಯ ಕರೆ

01/04/2026 6:14 AM

ವಾಹನ ಸವಾರರಿಗೆ ಗುಡ್‌ ನ್ಯೂಸ್: ಅವಧಿ ಮುಗಿದ ನಂತರವೂ 30 ದಿನಗಳ ಕಾಲ `DL’ ಮಾನ್ಯ!

01/04/2026 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.