Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ‘ಉಚಿತ ಬಸ್ ಪಾಸ್’ ನೀಡಲು ಅರ್ಜಿ ಆಹ್ವಾನ | Journalist Bus Pass

12/10/2025 1:21 PM

ಗಡಿಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವು: ಅಫ್ಘಾನಿಸ್ತಾನ ಹೇಳಿಕೆ

12/10/2025 1:15 PM

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಎಳ್ಳು ಅಮವಾಸ್ಯೆ’ ಬಗ್ಗೆ ಮಹತ್ವದ ಮಾಹಿತಿ: ‘ಎಳ್ಳಿನಿಂದ ತರ್ಪಣ’ ಮಾಡುವುದರ ಮಹತ್ವ
KARNATAKA

‘ಎಳ್ಳು ಅಮವಾಸ್ಯೆ’ ಬಗ್ಗೆ ಮಹತ್ವದ ಮಾಹಿತಿ: ‘ಎಳ್ಳಿನಿಂದ ತರ್ಪಣ’ ಮಾಡುವುದರ ಮಹತ್ವ

By kannadanewsnow0911/01/2024 11:05 AM

ಪ್ರಪಂಚದಲ್ಲಿ ಹುಟ್ಟುವ ಪ್ರತಿಯೊಂದು ಮನುಷ್ಯನು ಹುಟ್ಟುವಾಗಲೇ ಐದು ಋಣವುಳ್ಳವನಾಗುತ್ತಾನೆ. ದೇವಋಣ, ಋಷಿಋಣ, ಪಿತೃಋಣ, ಮನುಷ್ಯಋಣ ಮತ್ತು ಭೂತಋಣ. ದೇವತೆಗಳು, ಋಷಿಗಳು, ಪಿತೃಗಳು, ಮಾನವರು ಮತ್ತು ಪ್ರಾಣಿಗಳು ಇವರೆಲ್ಲರಿಂದ ನಾವು ನಾನಾವಿಧದ ಉಪಕಾರಗಳನ್ನು ಪಡೆಯತ್ತೇವೆ. ಅವರ ಹಂಗಿಲ್ಲದೆ ಬದುಕುವ ಸಾಮರ್ಥ್ಯ ನಮಗಾರಿಗೂ ಇಲ್ಲವಾದ್ದರಿಂದ ಇವರೆಲ್ಲರ ಉಪಕಾರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಸ್ಮರಣೆಯು ಕೇವಲ ಯಾಂತ್ರಿಕವಾಗಿರದೆ, ಅವುಗಳ ಮೂಲಕ ಭಗವಂತನ ಆರಾಧನೆಯಾಗಬೇಕು ಎಂದು ತಿಳಿಸುತ್ತವೆ ಶಾಸ್ತ್ರಗಳು. ಸ್ವಾಧ್ಯಾಯ ಮಾಡುವುದು, ಹವನ, ಶ್ರಾದ್ಧ, ತಿಲತರ್ಪಣ ,ಅನ್ನದಾನ ಮುಂತಾದವುಗಳು ಅರ್ಚನೆಗಳಾಗಿವೆ.

ಪ್ರತಿಯೊಬ್ಬನೂ ತನ್ನ ತಂದೆತಾಯಿಗಳಿಗೆ ಮಗನೆಂದು ಹೇಗೆ ಅನ್ನಿಸಿಕೊಳ್ಳುತ್ತಾನೆ?
ಎಂಬ ಪ್ರಶ್ನೆಗೆ ಶಾಸ್ತ್ರೋಕ್ತವಾದ ಉತ್ತರ ಹೀಗಿದೆ:

“ಜೀವತೋ ವಾಕ್ಯಕರಣಾತ್
ಪ್ರತ್ಯಬ್ಧಂ ಭೂರಿಭೋಜನಾತ್ |
ಗಯಾಯಾಂ ಪಿಂಡದಾನಾಚ್ಚತ್ರಿಭಿಃ ಪುತ್ರಸ್ಯ ಪುತ್ರತಾ ||”

ತಂದೆತಾಯಿಗಳು ಬದುಕಿರುವಾಗ ಅವರ ಧರ್ಮಸಮ್ಮತವಾದ ಮಾತುಗಳನ್ನು ನಡೆಸಿಕೊಡುತ್ತಾ ಸಂತೋಷಪಡಿಸಬೇಕು. ಮೃತರಾದ ಮೇಲೆ ಪ್ರತಿವರ್ಷ ಅವರ ಶ್ರಾದ್ಧವನ್ನು ಭಕ್ತಿಯಿಂದ ಮಾಡಬೇಕು. ವಿಷ್ಣುಪಾದವಿರುವ ಗಯಾಕ್ಷೇತ್ರದಲ್ಲಿ ಒಮ್ಮೆಯಾದರೂ ಪಿತೃತೃಪ್ತಿಗಾಗಿ ಪಿಂಡದಾನ ಮಾಡಬೇಕು. ಈ ಮೂರು ಕರ್ಮಗಳಿಂದಾಗಿ ‘ಪುತ್ರ’ ಎನಿಸಬಲ್ಲ. ಹೀಗಾಗಿ ಪಿತೃದೇವತೆಗಳ ಪ್ರೀತಿಯನ್ನು ಉದ್ದೇಶಿಸಿ, ಮೃತರಾದ ತಂದೆತಾಯಿಗಳ ಶ್ರಾದ್ಧವನ್ನು ಶ್ರದ್ಧೆಯಿಂದ ಆಚರಿಸಬೇಕಾದುದು ಮಗನ ಮುಖ್ಯಕರ್ತವ್ಯ. ಇದು ಪಿತೃಯಜ್ಞ.

ತಾನು ಪ್ರತ್ಯಕ್ಷವಾಗಿ ಕಂಡಿದ್ದ, ಕಂಡಿರದ ಬಂಧುಬಳಗದವರಲ್ಲಿ ಬ್ರಹ್ಮಚಾರಿಯಾಗಿಯೇ ಮೃತರಾದವರಿಗೂ, ಕನ್ಯಾವಸ್ಥೆಯಲ್ಲಿ ಸತ್ತವರಿಗೂ, ಅಪಘಾತದಿಂದ ಮಡಿದವರಿಗೂ, ಕರ್ಮವನ್ನು ಮಾಡಲು ಅಧಿಕಾರಿಗಳೇ ಇಲ್ಲದಂತಹವರಿಗೂ ಅಲ್ಲದೆ ಜನ್ಮತಃ ದಿವ್ಯಾಂಗರಾಗಿ ಹುಟ್ಟಿ ಮೃತರಾದವರಿಗೂ, ಬೆಂಕಿ, ವಿದ್ಯುತ್, ಆಯುಧಗಳಿಂದ ಅಪಘಾತಗಳಿಂದ ಅಥವಾ ಮತ್ತಾವುದೇ ರೀತಿಯಿಂದ ದುರ್ಮರಣ ಹೊಂದಿದವರಿಗೂ, ಹೀಗೆ ಎಲ್ಲರ ಉದ್ಧಾರ ಮತ್ತು ತೃಪ್ತಿಗಾಗಿ ಅವರೆಲ್ಲರಿಗೂ ಸಮುದ್ರ ಅಥವಾ ಹೊಳೆಯಲ್ಲಿ ಸ್ನಾನ ಮಾಡಿ ತಿಲತರ್ಪಣವನ್ನು ಕೊಟ್ಟು ತೃಪ್ತಿಪಡಿಸುವ ಕ್ರಿಯೆ ಈ ಎಳ್ಳಮಾವಾಸ್ಯೆ ಯಲ್ಲಿ ಅತ್ಯಂತ ಶ್ರೇಷ್ಠ.

ಮನುಷ್ಯನ ಮರಣಾನಂತರ ಮಾಡುವ ಈ ವಿಧಾನದಲ್ಲಿ ಕಣ್ಣಿಗೆ ಕಾಣಿಸದಿರುವ ಆತನ ನಾಮ, ಗೋತ್ರವನ್ನು ಹೇಳಿ ಭೂಮಿಯಲ್ಲಿ ತರ್ಪಣ ಮಾಡಿದರೆ ಎಲ್ಲೋ ಇರುವ ಆತನಿಗೆ ಹೇಗೆ ಸಲ್ಲುತ್ತದೆ? ಎಂಬ ಪ್ರಶ್ನೆಗೆ ಶಾಸ್ತ್ರವು ಸಮಂಜಸವಾದ ಉತ್ತರ ನೀಡಿದೆ:-

ಭಗವಂತನು ಪ್ರದ್ಯುಮ್ನ, ಸಂಕರ್ಷಣ, ವಾಸುದೇವ ಎಂಬ ತನ್ನ ರೂಪಗಳಿಂದ ಪಿತೃದೇವತೆಗಳಲ್ಲಿ ಅಂತರ್ಗತನಾಗಿ ಇದ್ದು ನಾವು ನೀಡುವ ಎಳ್ಳಿನಿಂದ ಮಾಡುವ ತರ್ಪಣವನ್ನು ಅಂದರೆ ನಾವು ಭಾವನೆಯಿಂದ ನೀಡಿದಂತಹ ಈ ಆರಾಧನೆಯನ್ನು ತೆಗೆದುಕೊಂಡು ತೃಪ್ತನಾಗುತ್ತಾನೆ. ಮೃತರಾದ ನಮ್ಮ ಸಂಬಂಧಿಕರು ಪಶು, ಪಕ್ಷಿ, ಮಾನವ ಹೀಗೆ ಯಾವ ಯೋನಿಯಲ್ಲಿ ಜನಿಸಿದ್ದರೂ ಅವರವರಿಗೆ ಯೋಗ್ಯವಾದ ಆಹಾರ-ನೀರು ಸಿಗುವಂತೆ ಮಾಡಿ ಅನುಗ್ರಹಿಸುತ್ತಾನೆ. ಇದು ಆ ಭಗವಂತನು ಮಾಡಿದ ಅದ್ಭುತ ವ್ಯವಸ್ಥೆ.

‘ಶ್ರಾದ್ಧೇ ತ್ರೀಣಿ ಪವಿತ್ರಾಣಿ ದೌಹಿತ್ರಃ ಕುತಪಃ ತಿಲಃ |’ ಶ್ರಾದ್ಧ ಮಾಡಲು ಅತ್ಯಂತ ಶ್ರೇಷ್ಠವಾದ ಮೂರು ಸಂಗತಿಗಳು – ಹೆಣ್ಣುಮಗಳ ಮಗ, ಮಧ್ಯಾಹ್ನ ಕಾಲ, ಎಳ್ಳು. ಇವೆಲ್ಲಕ್ಕಿಂತ ಮುಖ್ಯವಾಗಿ ಇರಬೇಕಾದುದು ಶ್ರದ್ಧೆ.
ಶ್ರದ್ಧೆಯಿಂದ ಮಾಡಲೇಬೇಕಾದ್ದರಿಂದ ಈ ಕಾರ್ಯವನ್ನು ‘ಶ್ರಾದ್ಧ’ ಎಂದು ಶಾಸ್ತ್ರಗಳು ಕರೆದಿವೆ.

ಈ ಶ್ರಾದ್ಧಕ್ರಿಯೆಯಿಂದ ಅಥವಾ ತಿಲ ತರ್ಪಣದಿಂದ ಸಂತೋಷಗೊಂಡ ಪಿತೃದೇವತೆಗಳು ಶ್ರಾದ್ಧಕರ್ತೃಗಳಿಗೆ, ಅವರ ಕುಟುಂಬಕ್ಕೆ ಸಕಲವಿಧವಾದ ಮಂಗಳ ಉಂಟಾಗುವಂತೆ ಆಶೀರ್ವದಿಸುತ್ತಾರೆ. ಇದರಿಂದ ಯಜಮಾನನ ಕುಟುಂಬಕ್ಕೆ ಸಕಲವಿಧ ಕ್ಷೇಮ-ಅಭಿವೃದ್ಧಿ ನಿಶ್ಚಿತ. ಹೀಗಾಗಿ ಜನ್ಮ ಕೊಟ್ಟು ಸಾಕಿ ಸಲಹಿದ ಪಿತೃಗಳಿಗೆ ಉಪಕಾರಸ್ಮರಣೆಯಿಂದ ಮಾಡಬೇಕಾದ ತರ್ಪಣ ಕಾರ್ಯ ಮಕ್ಕಳ ಮುಖ್ಯ ಕರ್ತವ್ಯವಾಗಿದೆ. .

ಮಹಾಭಾರತ ಕಾಲದಲ್ಲಿ ನಡೆದ ಕುರುಕ್ಷೇತ್ರ ಯುದ್ಧದಲ್ಲಿ ಮಡಿದ ಬಂಧುಮಿತ್ರರಿಗೆ ಎಳ್ಳಿನಿಂದ ತರ್ಪಣ ಮಾಡಿದ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸಲಾಗುತ್ತದೆ ಎಂದೂ ಹೇಳುತ್ತಾರೆ. ಈ ದಿನ ತರ್ಪಣ ಬಿಟ್ಟು, ಸತ್ಪಾತ್ರರಿಗೆ ಊಟ ಹಾಕಿ, ದಾನ ನೀಡಿ ಶ್ರಾದ್ಧ ಕಾರ್ಯಗಳನ್ನು ಮಾಡುವುದರಿಂದ ಬದುಕಿನಲ್ಲಿ ಶಾಂತಿ, ನೆಮ್ಮದಿ ದೊರೆಯುತ್ತದೆ ಎಂಬ ನಂಬಿಕೆಯಿದೆ. ವಿಶೇಷವಾಗಿ ಎಳ್ಳನ್ನು ದಾನ ಮಾಡುತ್ತಾರೆ.

ಮಲೆನಾಡು ಮತ್ತು ಕರಾವಳಿಯ ಭಾಗಗಳಲ್ಲಿ ಈ ದಿನ ತೀರ್ಥಸ್ನಾನ ಪ್ರಮುಖವಾಗಿದೆ. ಈ ದಿನ ಜನರು ಸಮುದ್ರ ಸ್ನಾನ ಮಾಡುತ್ತಾರೆ. ಉಡುಪಿ ಸಮೀಪದ ವಡಭಾಂಡೇಶ್ವರ ದೇವಸ್ಥಾನದಲ್ಲಿ ಬಲರಾಮ ದೇವರ ದರ್ಶನ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ.

ತೀರ್ಥಹಳ್ಳಿಯಲ್ಲಿ ಎಳ್ಳು ಅಮಾವಾಸ್ಯೆಯನ್ನು ಅತ್ಯಂತ ವಿಶಿಷ್ಟ ಮತ್ತು ಸಡಗರದಿಂದ ಆಚರಿಸಲಾಗುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಿಂದೆ ಜಮದಗ್ನಿ ಋಷಿಯ ಆದೇಶದಂತೆ ಮಗ ಪರಶುರಾಮ ತನ್ನ ಕೊಡಲಿಯಿಂದ ತಾಯಿ ರೇಣುಕಾದೇವಿಯ ರುಂಡವನ್ನು ಕಡಿದು, ಬಳಿಕ ಕೊಡಲಿಗೆ ಅಂಟಿದ ರಕ್ತದ ಕಲೆಯನ್ನು ಅಳಿಸಲೆಂದು ಸಾಕಷ್ಟು ನದಿಗಳಲ್ಲಿ ಶುಚಿಗೊಳಿಸಿದರೂ, ಒಂದು ಹನಿ ರಕ್ತದ ಕಲೆ ಹಾಗೆಯೇ ಉಳಿಯಿತು. ಕೊನೆಗೆ ಪರಶುರಾಮರು ತುಂಗಾ ನದಿಯಲ್ಲಿ ಕೊಡಲಿಯನ್ನು ಅದ್ದಿದಾಗ ಆ ರಕ್ತದ ಕಲೆ ಹೊರಟುಹೋಯಿತಂತೆ. ಈ ರೀತಿಯ ಪಾವಿತ್ರ್ಯ ಹೊಂದಿರುವ ತುಂಗಾ ನದಿಯು ತೀರ್ಥಕ್ಕೆ ಸಮನಾಗಿರುವುದರಿಂದ ಈ ಕ್ಷೇತ್ರ ತೀರ್ಥಹಳ್ಳಿ ಎಂಬ ಹೆಸರು ಪಡೆಯಿತೆಂದು ಹೇಳುತ್ತಾರೆ. ಆದ್ದರಿಂದ ಎಳ್ಳು ಅಮಾವಾಸ್ಯೆಯ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಈ ಕ್ಷೇತ್ರಕ್ಕೆ ಬಂದು ತುಂಗೆಯಲ್ಲಿ ಮಿಂದು ಪುನೀತರಾಗುತ್ತಾರೆ.

Share. Facebook Twitter LinkedIn WhatsApp Email

Related Posts

GOOD NEWS: ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ‘ಉಚಿತ ಬಸ್ ಪಾಸ್’ ನೀಡಲು ಅರ್ಜಿ ಆಹ್ವಾನ | Journalist Bus Pass

12/10/2025 1:21 PM1 Min Read

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM1 Min Read

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM1 Min Read
Recent News

GOOD NEWS: ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ‘ಉಚಿತ ಬಸ್ ಪಾಸ್’ ನೀಡಲು ಅರ್ಜಿ ಆಹ್ವಾನ | Journalist Bus Pass

12/10/2025 1:21 PM

ಗಡಿಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವು: ಅಫ್ಘಾನಿಸ್ತಾನ ಹೇಳಿಕೆ

12/10/2025 1:15 PM

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM
State News
KARNATAKA

GOOD NEWS: ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ‘ಉಚಿತ ಬಸ್ ಪಾಸ್’ ನೀಡಲು ಅರ್ಜಿ ಆಹ್ವಾನ | Journalist Bus Pass

By kannadanewsnow0912/10/2025 1:21 PM KARNATAKA 1 Min Read

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ…

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

12/10/2025 1:11 PM

BREAKING : ರಾಜ್ಯದ 10 ಮಂದಿ ಸಾಹಿತಿಗಳಿಗೆ 2024 ರ ‘ಸಾಹಿತ್ಯಶ್ರೀ’ ಪ್ರಶಸ್ತಿ ಘೋಷಣೆ : ಇಲ್ಲಿದೆ ವಿಜೇತರ ಪಟ್ಟಿ

12/10/2025 1:02 PM

BREAKING : `ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ : ಸಂಚಾರದಲ್ಲಿ ವ್ಯತ್ಯಯ

12/10/2025 12:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.