Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ಬೆನ್ನಲೇ ಮತ್ತೊಂದು ಗುಡ್‌ನ್ಯೂಸ್‌: ಕೌಶಲ್ಯಾಭಿವೃದ್ಧಿ ಉದ್ಯೋಗ ನೀಡಲಿದೆ ರಾಜ್ಯ ಸರ್ಕಾರ
KARNATAKA

ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ಬೆನ್ನಲೇ ಮತ್ತೊಂದು ಗುಡ್‌ನ್ಯೂಸ್‌: ಕೌಶಲ್ಯಾಭಿವೃದ್ಧಿ ಉದ್ಯೋಗ ನೀಡಲಿದೆ ರಾಜ್ಯ ಸರ್ಕಾರ

By kannadanewsnow0712/01/2024 5:51 PM

ಶಿವಮೊಗ್ಗ: ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿ ಮಾತನಾಡಿದರು.

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ *ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ.

ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ.
ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ‌. ಇಂಥ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ.

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ.
ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು.

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನಚಳವಳಿ ನಡೆಯಲಿ.

Another good news after yuvanidhi programme launched: State govt to provide skill development jobs ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ಬೆನ್ನಲೇ ಮತ್ತೊಂದು ಗುಡ್‌ನ್ಯೂಸ್‌: ಕೌಶಲ್ಯಾಭಿವೃದ್ಧಿ ಉದ್ಯೋಗ ನೀಡಲಿದೆ ರಾಜ್ಯ ಸರ್ಕಾರ
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM3 Mins Read

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM1 Min Read

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 500 ಮೀಟರ್ ಒಳಗಿನ `ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ `ಟ್ರಾನ್ಸ್ಫಾರ್ಮರ್’.!

05/07/2025 2:12 PM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

By kannadanewsnow5705/07/2025 2:35 PM KARNATAKA 3 Mins Read

ಬೆಂಗಳೂರು : ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ನನ್ನ ಭೂಮಿ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಕೇವಲ 7 ತಿಂಗಳಲ್ಲಿ…

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 500 ಮೀಟರ್ ಒಳಗಿನ `ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ `ಟ್ರಾನ್ಸ್ಫಾರ್ಮರ್’.!

05/07/2025 2:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.