ಬೆಂಗಳೂರು : ಒಳ ಮೀಸಲಾತಿ ಕುರಿತಂತೆ ಇಂದು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಲ್ಲಿ ಗೃಹ ಖಾತೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ತೆಗೆದುಕೊಂಡಿದ್ದು, ನ್ಯಾ. ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನಿಸಲಾಗಿದೆ. ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ವರದಿಯನ್ನೇ ತಿರಸ್ಕಾರ ಮಾಡಿದರು ಎಂದು ಅವರು ತಿಳಿಸಿದರು.
ಕಾನೂನಾತ್ಮಕವಾಗಿ ಒಳ ಮೀಸಲಾತಿಯನ್ನು ಕೊಡಬೇಕಾಗುತ್ತದೆ.ನಾವೇ ಸವಿಧಾನಕ್ಕೆ ತಿದ್ದುಪಡಿ ತರಲು ಆಗುವುದಿಲ್ಲ.ಶಿಫಾರಸು ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಗ್ರಹ ಖಾತೆ ಸಚಿವಾಜಿ ಪರಮೇಶ್ವರ್ ತಿಳಿಸಿದರು.