ನವದೆಹಲಿ: ಗುಜರಾತ್ನ ವಡೋದರಾದಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಯಲ್ಲಿ ಜೀವಹಾನಿ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಪಿಕ್ನಿಕ್ ಗೆ ತೆರಳಿದ್ದ 27 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ದೋಣಿ ಮುಳುಗಿ 14 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ 16 ಜನರು ಸಾವನ್ನಪ್ಪಿದ ಘಟನೆ ಗುಜರಾತ್ ನ ವಡೋದರಾ ನಗರದ ಹೊರವಲಯದಲ್ಲಿ ಗುರುವಾರ ನಡೆದಿದೆ.
“ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮಗುಚಿ ಜೀವಹಾನಿಯಾಗಿರುವುದು ದುಃಖ ತಂದಿದೆ. ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ. ಮೃತರ ಕುಟುಂಬಗಳಿಗೆ PMNRFನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂದು ಅವರು ಟ್ವಿಟರರ್ನಲ್ಲಿ ಮಾಹಿತಿ ನೀಡಿದ್ದಾರೆ.
Distressed by the loss of lives due to a boat capsizing at the Harni lake in Vadodara. My thoughts are with the bereaved families in this hour of grief. May the injured recover soon. The local administration is providing all possible assistance to those affected.
An ex-gratia…
— PMO India (@PMOIndia) January 18, 2024