Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM

BREAKING: ಪಾಕಿಸ್ತಾನದ ಶೆಲ್ ದಾಳಿಗೆ ಪೂಂಚ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ: ವಿದೇಶಾಂಗ ಸಚಿವಾಲಯ

09/05/2025 6:25 PM

ಪಾಕಿಸ್ತಾನದ 4 ವಾಯು ರಕ್ಷಣಾ ನೆಲೆಗಳ ಮೇಲೆ ಡ್ರೋನ್ ದಾಳಿ, ಒಂದು ರಾಡಾರ್ ಹೊಡೆದುರುಳಿಸಿದ ಭಾರತ

09/05/2025 6:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ಸಿಹಿಸುದ್ದಿ: ಕಾರ್ಮಿಕ ಇಲಾಖೆಯ ಈ ಯೋಜನೆಗೆ ಅನುಮತಿ
KARNATAKA

ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ಸಿಹಿಸುದ್ದಿ: ಕಾರ್ಮಿಕ ಇಲಾಖೆಯ ಈ ಯೋಜನೆಗೆ ಅನುಮತಿ

By kannadanewsnow0719/01/2024 10:07 AM
vidhana soudha
vidhana soudha

ಬೆಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ದೇಶದಲ್ಲಿಯೇ ಪ್ರಪ್ರಥಮವಾಗಿ ಜಾರಿಗೆ ತರುತ್ತಿರುವ Karnataka Motor Transport and other Allied workers Social Security Welfare ಯೋಜನೆಯಾಗಿದೆ. ಸಿದ್ಧರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಈ ಯೋಜನೆಗೆ ಅನುಮತಿ ನೀಡಲಾಗಿದೆ.

ಅಸಂಘಟಿತ ವಲಯದ ಕಾರ್ಮಿಕರ ಹಿತಕಾಯಲು ಜಾರಿಗೆ ತಂದಿರುವ ಈ ಯೋಜನೆಯು ಕರ್ನಾಟಕ ಸರ್ಕಾರದ ಕಾರ್ಮಿಕರ ಬಗೆಗಿನ ಕಾಳಜಿಗೆ ನಿದರ್ಶನವಾಗಿದೆ.
ರಾಮಲಿಂಗಾ ರೆಡ್ಡಿ, ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಹಾಗೂ ಸಂತೋಷ್ ಲಾಡ್ ಕಾರ್ಮಿಕ ಸಚಿವರ ಪ್ರಯತ್ನದೊಂದಿಗೆ ಈ ಯೋಜನೆಯು ಜಾರಿಗೆ ಬರಲಿದೆ.

ಬಹುವರ್ಷಗಳದಿಂದ ಖಾಸಗಿ ವಾಣಿಜ್ಯ ಸಾರಿಗೆ ನೌಕರರ ಬೇಡಿಕೆ‌ ಇದಾಗಿದ್ದು,ಇತ್ತೀಚಿಗಿನ ಮುಷ್ಕರದ ಸಮಯದಲ್ಲಿಯೂ ಕೂಡ ಈ ಬೇಡಿಕೆಯನ್ನು ಸಂಘಟನೆಗಳು ಸಲ್ಲಿಸಿದ್ದು, ಅವರ ಬೇಡಿಕೆಯನ್ನು ಪರಿಗಣಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಅಸಂಘಟಿತ ಕಾರ್ಮಿಕರಲ್ಲಿ ಪ್ರಮುಖ ವರ್ಗವಾದ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿಕಾಬ್, ಲಾರಿ ಇತ್ಯಾಧಿ ವರ್ಗಗಳ ಕಾರ್ಮಿಕರ ಹೆಚ್ಚಿನ ವೃತ್ತಿಯು ದೈಹಿಕ ಶ್ರಮ ಅನಿರಿಕ್ಷಿತ ಅಪಘಾತಕ್ಕೆ ತುತ್ತಾಗುವ ವೃತ್ತಿಯಾಗಿದೆ. ಕುಟುಂಬದಲ್ಲಿ ದುಡಿಯುವ ವ್ಯಕ್ತಿಯು ಅಪಘಾತದಿಂದ ನಿಧನರಾದಲ್ಲಿ ಅಥವಾ ಶಾಶ್ವತ ಅಂಗವೈಕಲ್ಯವಾದಲ್ಲಿ ಅವರನ್ನು ಅವಲಂಭಿಸಿರುವ ಕುಟುಂಬವು ಆರ್ಥಿಕವಾಗಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.

ಮೋಟಾರು ಸಾರಿಗೆ ವಾಹನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬುಕ್ಕಿಂಗ್ ಕ್ಲರ್ಕ್, ನಗದು ಕರ್ಕ್ ಗಳು ಮೋಟಾರು ಗ್ಯಾರೇಜುಗಳಲ್ಲಿ ತೊಡಗಿರುವ ಮೆಕಾನಿಕ್, ಟೈಯರ್ ರಿಟ್ರೇಡಿಂಗ್ , ಪಂಚರ್ ಶಾಪ್ ಗಳಲ್ಲಿ ಕೆಲಸ ಮಾಡುವರು ಹಾಗೂ ಆಟೋ ಮೊಬೈಲ್ ಬಾಡಿ ಬಿಲ್ಡಿಂಗ್ ನಲ್ಲಿ ಕಾರ್ಯ ನಿರ್ವಹಿಸುವುವವರಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಈ ಅಸಂಘಟಿತ ಶ್ರಮಿಕ ವರ್ಗದ ಕಾರ್ಮಿಕರಲ್ಲಿ ಗರಿಷ್ಟ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಕಾರ್ಮಿಕರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ದುರ್ಬಲರಾಗಿರುತ್ತಾರೆ. ಇಂತಹವರ ಹಿತ ಕಾಪಾಡಲು ಈ ಯೋಜನೆಯನ್ನು ಜಾರಿಗೆ ತರುವ ಮೂಲಕ ಫಲಾನುಭವಿಗಳಿಗೆ ಅಪಘಾತ ಪರಿಹಾರ, ನೈಸರ್ಗಿಕ ಮರಣ ಪರಿಹಾರ ಹಾಗೂ ಅಂತ್ಯ ಸಂಸ್ಕಾರ ವೆಚ್ಚ, ವಿವಾಹ ಭತ್ಯೆ, ಫಲಾನುಭವಿ / ಫಲಾನುಭವಿಯ ಪತ್ನಿಗೆ ಹೆರಿಗೆ ಭತ್ಯೆ, ಮಕ್ಕಳಿಗೆ ಶೈಕ್ಷಣಿಕ ಸಹಾಯಕ, ಭವಿಷ್ಯ ನಿಧಿ, ವಸತಿ ಸೌಲಭ್ಯ ಹಾಗೂ ವೃದ್ದಾಶ್ರಮ ಇತ್ಯಾದಿ ಸೌಲಭ್ಯಗಳನ್ನು ಹಂತ-ಹಂತವಾಗಿ ಒದಗಿಸುವ ಸದುದ್ದೇಶವನ್ನು ಹೊಂದಿದೆ.

ಅಂದಾಜು ವಾರ್ಷಿಕ ಸುಮಾರು ರೂ.270 ಕೋಟಿಗಳ ನಿಧಿಯನ್ನು ಮೀಸಲಿರಿಸುವ ಯೋಜನೆಯನ್ನು ರೂಪಿಸಲಾಗಿದೆ.

ನಿಧಿ ಸಂಗ್ರಹಣೆ, ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಸಾಮಾಜಿಕ ಸೌಲಭ್ಯ ವಿತರಣೆಗಾಗಿ ಪ್ರತ್ಯೇಕ Karnataka Motor Transport and other allied workers social security welfare Board ರಚಿಸಲು ಸಹ ಉದ್ದೇಶಿಸಲಾಗಿದೆ.

Good news for unorganised workers from state government: Labour department approves scheme ರಾಜ್ಯ ಸರ್ಕಾರದಿಂದ ಅಸಂಘಟಿತ ಕಾರ್ಮಿಕರಿಗೆ ಸಿಹಿಸುದ್ದಿ: ಕಾರ್ಮಿಕ ಇಲಾಖೆಯ ಈ ಯೋಜನೆಗೆ ಅನುಮತಿ
Share. Facebook Twitter LinkedIn WhatsApp Email

Related Posts

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM1 Min Read

ಮೇ, 26 ರಿಂದ 31 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

09/05/2025 6:22 PM1 Min Read

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

09/05/2025 6:20 PM1 Min Read
Recent News

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

09/05/2025 6:39 PM

BREAKING: ಪಾಕಿಸ್ತಾನದ ಶೆಲ್ ದಾಳಿಗೆ ಪೂಂಚ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ: ವಿದೇಶಾಂಗ ಸಚಿವಾಲಯ

09/05/2025 6:25 PM

ಪಾಕಿಸ್ತಾನದ 4 ವಾಯು ರಕ್ಷಣಾ ನೆಲೆಗಳ ಮೇಲೆ ಡ್ರೋನ್ ದಾಳಿ, ಒಂದು ರಾಡಾರ್ ಹೊಡೆದುರುಳಿಸಿದ ಭಾರತ

09/05/2025 6:22 PM

ಮೇ, 26 ರಿಂದ 31 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

09/05/2025 6:22 PM
State News
KARNATAKA

GOOD NEWS: UGC, ICAR, AICTE ವೇತನದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ | DA Hike

By kannadanewsnow0909/05/2025 6:39 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಜಿಸಿ, ಐಸಿಎಆರ್, ಎಐಸಿಟಿಇ ಅನುಸಾರ ವೇತನ ಪಡೆಯುತ್ತಿರುವಂತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು…

ಮೇ, 26 ರಿಂದ 31 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2

09/05/2025 6:22 PM

ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

09/05/2025 6:20 PM
Retirement simplified pension application

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

09/05/2025 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.