Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ಅಂತಿಮ ‘ಮತದಾರರ’ ಪಟ್ಟಿ 2024 ಪ್ರಕಟ: 17 ಲೋಕಸಭೆ ಕ್ಷೇತ್ರಗಳಲ್ಲಿ ‘ಮಹಿಳೆಯರದ್ದೇ; ಪ್ರಾಬಲ್ಯ
KARNATAKA

ಕರ್ನಾಟಕದ ಅಂತಿಮ ‘ಮತದಾರರ’ ಪಟ್ಟಿ 2024 ಪ್ರಕಟ: 17 ಲೋಕಸಭೆ ಕ್ಷೇತ್ರಗಳಲ್ಲಿ ‘ಮಹಿಳೆಯರದ್ದೇ; ಪ್ರಾಬಲ್ಯ

By kannadanewsnow0723/01/2024 5:15 AM

ಬೆಂಗಳೂರು: ಸೋಮವಾರ ಆಯೋಗ ಪ್ರಕಟಿಸಿರುವ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಕೂಲಂಕುಷವಾಗಿ ಪರಿಶೀಲಿಸಿ ಸಲಹೆಗಳಿದ್ದಲ್ಲಿ ಆಯೋಗಕ್ಕೆ ಲಿಖಿತವಾಗಿ ಪತ್ರ ಬರೆಯುವ ಮೂಲಕ ಗಮನ ಸೆಳೆಯಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದರು.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಪ್ರಕಟಿಸಲಾದ ರಾಜ್ಯದ ಅಂತಿಮ ಮತದಾರರ ಪಟ್ಟಿ – 2024 ರ ಕುರಿತು ಇಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಆಗಿದ್ದು, ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಇದ್ದಾರೆ. ಇದರಲ್ಲಿ ಮಹಿಳಾ ಮತದಾರರಿಗೂ ಹಾಗೂ ಪುರುಷ ಮತದಾರರಿಗೂ ಸ್ವಲ್ಪ ಮಾತ್ರ ವ್ಯತ್ಯಾಸವಿರುವುದು ಸಂತಸದ ವಿಷಯವಾಗಿದೆ. ಮಹಿಳೆಯರು ಸಹ ದೊಡ್ಡ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 17,937 ಶತಾಯುಷಿ ಮತದಾರರಿದ್ದಾರೆ, 46,501 ಸೇವಾ ಮತದಾರರು, 3,164 ಸಾಗರೋತ್ತರ ಮತದಾರರು, 80+ ವಯಸ್ಸಿನ 12,71,862 ಮತದಾರರು ಸೇರಿದಂತೆ 5,62,890 ದಿವ್ಯಾಂಗ ಮತದಾರರು ಇದ್ದಾರೆ ಎಂದು ಅವರು ವಿವರಿಸಿದರು.

224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ಅತಿ ಹೆಚ್ಚು ಅಂದರೆ 7,17,201 ಮತದಾರರನ್ನು ಹೊಂದಿದೆ. ವ್ಯತಿರಿಕ್ತವಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 1,67,556 ಮತದಾರರಿದ್ದಾರೆ ಎಂದು ಅವರು ಉಲ್ಲೇಖಿಸಿದರು.

ಅಂತಿಮ ಮತದಾರರ ಪಟ್ಟಿ -2024 ರ ಪ್ರಕಾರ ಒಟ್ಟು ಮತಗಟ್ಟೆಗಳ ಸಂಖ್ಯೆ 58,834 ಆಗಿದೆ. ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಸಮಯದಲ್ಲಿ 845 ಮತಗಟ್ಟೆಗಳನ್ನು ಸೇರ್ಪಡೆಗೊಳಿಸಿದ್ದು, 293 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ. ಅದರಂತೆ 552 ಮತಗಟ್ಟೆಗಳ ನಿವ್ವಳ ಹೆಚ್ಚಳವಾಗಿದೆ.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಕ್ಷಣವೇ ನೋಂದಾಯಿಸಲು ಪೆÇ್ರೀತ್ಸಾಹಿಸಲಾಗುತ್ತದೆ. ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂಬುದು ಗಮನದಲ್ಲಿರಲಿ.

ಆದ್ದರಿಂದ, ಮತದಾರರು ತುರ್ತಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ಮನವಿ ಮಾಡಲಾಗಿದೆ. ಅರ್ಹ ಮತದಾರರು ಅರ್ಜಿಗಳನ್ನು ಸಲ್ಲಿಸಲು ತಮ್ಮ ಮೊಬೈಲ್ ನಲ್ಲಿ ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಅರ್ಜಿ ಸಲ್ಲಿಸಬಹುದು ಅಥವಾ https://voterportal.eci.gov.in/ ಪೆÇೀರ್ಟಲ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಭಾವಚಿತ್ರ ಅಳವಡಿಕೆ ಹಾಗೂ ಮತದಾರರ ಗುರುತಿನ ಚೀಟಿಗಳ ಹಂಚಿಕೆಯನ್ನು ಶೇಕಡಾ ನೂರಕ್ಕೆ ನೂರರಷ್ಟು ಸಾಧಿಸಲಾಗಿದೆ. ಮತದಾರರ ಗುರುತಿನ ಚೀಟಿಗಳನ್ನು ಮತದಾರರಿಗೆ ತ್ವರಿತ ಅಂಚೆ ಸೇವೆಯ ಮೂಲಕ ಆಯಾ ವಿಳಾಸಗಳಿಗೆ ರವಾನಿಸಲಾಗುತ್ತಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024: ಸಭೆಯ ಕೊನೆಯಲ್ಲಿ ಪ್ರಸ್ತುತ ಆಯೋಗ ಘೋಷಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾಧಿಕಾರಿಗಳು ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಚುನಾವಣೆ ಸಂದರ್ಭದಲ್ಲಿ ಪಾಲಿಸಬೇಕಾದ ನೀತಿ-ನಿಯಮಗಳ ಕುರಿತು ಆಯೋಗ ಪ್ರಕಟಿಸಿರುವ ಚುನಾವಣಾ ನೀತಿ ಸಂಹಿತೆಯನ್ನು ಖಡ್ಢಾಯವಾಗಿ ಪಾಲಿಸಬೇಕು, ಪ್ರಾಶಸ್ತ್ಯ ಮತದಾನ ಮಾಡುವ ಕುರಿತು ಅನುಮಾನಗಳನ್ನು ಬಗೆಹರಿಸುವಲ್ಲಿ ಅವಶ್ಯಕ ಜಾಗೃತಿ ಸಂದೇಶವುಳ್ಳ ಬಿತ್ತಿಚಿತ್ರ ಹಾಗೂ ಕಿರುಚಿತ್ರಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮ ರಾವ್, ರಾಷ್ಟ್ರೀಯ ಪಕ್ಷಗಳಾದ ಆಮ್ ಆದ್ಮಿ ಪಕ್ಷ, ಬಹುಜನ ಸಮಾಜ ಪಕ್ಷ, ಭಾರತೀಯ ಜನತಾ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸಿಸ್ಟ್), ಇಂಡಿಯನ್ ನ್ಯಾಷನಲ್ ಕಾಂಗ್ರೇಸ್, ನ್ಯಾಷನಲ್ ಪೀಪಲ್ಸ್ ಪಾರ್ಟಿ ಹಾಗೂ ರಾಜ್ಯಮಟ್ಟದ ಪಕ್ಷ ಜನತಾದಳ (ಸೆಲ್ಯುಲರ್) ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Karnataka final voters' list 2024: 'Women' in 17 Lok Sabha constituencies Dominance ಕರ್ನಾಟಕದ ಅಂತಿಮ ಮತದಾರರ ಪಟ್ಟಿ 2024 ಪ್ರಕಟ: 17 ಲೋಕಸಭೆ ಕ್ಷೇತ್ರಗಳಲ್ಲಿ 'ಮಹಿಳೆಯರದ್ದೇ; ಪ್ರಾಬಲ್ಯ
Share. Facebook Twitter LinkedIn WhatsApp Email

Related Posts

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM1 Min Read

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM2 Mins Read

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM2 Mins Read
Recent News

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

14/05/2025 7:48 PM

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM
State News
KARNATAKA

BREAKING : ಕೆಲಸ ಕೊಡಿಸೋದಾಗಿ ಆಮಿಷ ಒಡ್ಡಿ, 14 ಲಕ್ಷಕ್ಕೂ ಅಧಿಕ ವಂಚನೆ : ಸಿಸಿಬಿ ಪೊಲೀಸರಿಂದ ಕಂಪನಿ HR ಅರೆಸ್ಟ್

By kannadanewsnow0514/05/2025 7:48 PM KARNATAKA 1 Min Read

ಬೆಂಗಳೂರು : ಕಂಪನಿಯಲ್ಲಿ ಕೆಲಸ ಕೊಡಿಸುವ ಆಮಿಷ ತೋರಿಸಿ, ಅನೇಕರಿಂದ ಸುಮಾರು 14 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ…

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.