ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶದ ಮೇರೆಗೆ ಇಂದು 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ.
ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ, ಮಾಡಿದ್ದು, ಬೆಂಗಳೂರಿನ 117 ಕೇಂದ್ರಗಳಲ್ಲಿ ಇಂದು ಪಿ ಎಸ್ ಐ ಮರು ಪರೀಕ್ಷೆ ನಡೆಯಲಿದೆ ಬೆಳಗ್ಗೆ 7 ರಿಂದ ಪರೀಕ್ಷೆ ಮುಗಿಯುವವರೆಗೆ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗೆಗಳನ್ನು ಬಂದ್ ಮಾಡಲಾಗಿದೆ. ಈ ಹಿಂದೆ ನಡೆದಂತಹ ಘಟನೆ ಮುರುಕಳಿಸಬಾರದು ಎಂದು ಆಯುಕ್ತರಿಂದ ಬಿಗಿ ಕ್ರಮ ಕೈಗೊಳ್ಳಲಾಗಿದೆ.ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಯಾನಂದ ಆದೇಶ ಹೊರಡಿಸಿದ್ದಾರೆ.