ಬೆಂಗಳೂರು : ಬಿಜೆಪಿ ಅವಧಿಯಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದ್ದ 545 ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸುವಂತೆ ಸಮಿತಿ ಒಂದನ್ನು ರಚಿಸಿತ್ತು ಹೈಕೋರ್ಟ್ ನಿವೃತ್ತ ನ್ಯಾ ಬಿ ವಿರಪ್ಪ ನೇತೃತ್ವದ ಸಮಿತಿಯು ಇದೀಗ ತನಿಕ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿದ್ದಾರೆ.
ನಿನ್ನೆ ನ್ಯಾ ಬಿರಪ್ಪ ನೇತೃತ್ವದ ತನಿಖಾ ಸಮಿತಿಯು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿಯನ್ನು ಸಲ್ಲಿಸಿದೆ.ಒಟ್ಟು 470ಕ್ಕೂ ಹೆಚ್ಚು ಪುಟಗಳ ವಾರದಿಯನ್ನ ಸಲ್ಲಿಸಿದೆ. ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಲಾಗಿದೆ.
ಪ್ರಕರಣದಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೆಲ ಪ್ರಭಾವಿಗಳು ಬಗ್ಗೆ ಉಲ್ಲೇಖಿಸಲಾಗಿದೆ.ವರದಿಯನ್ನ ಅಂಶಗಳನ್ನು ಗೌಪ್ಯವಾಗಿರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸಮಿತಿ ಕೊಟ್ಟ ವರದಿಯನ್ನು ಕ್ಯಾಬಿನೆಟ್ ನಲ್ಲಿ ಇಡಲು ಸರ್ಕಾರ ಚಿಂತನೆ ನಡೆಸುತ್ತಿದೆ.ನಂತರ ವರದಿಯನ್ನು ಜಂಟಿ ಅಧಿವೇಶನದಲ್ಲಿ ಮಂಡಿಸಲು ಸಿಎಂ ನಿರ್ಧಾರ ಕೈಗೊಂಡಿದ್ದಾರೆ.
545 ಪಿಎಸ್ಐ ನೇಮಕಾತಿ ಅಕ್ರಮದ ವರದಿಯನ್ನು ಸಮಿತಿ ಸಿದ್ದಪಡಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ನಡೆದಿತ್ತು ಎಂದು ಹೇಳಲಾಗುತ್ತಿತ್ತು. ಮರು ತನಕಗಾಗಿ ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿತ್ತು. ನಿವೃತ್ತ ನ್ಯಾ. ಬಿ ವಿರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿದ್ದ ಸರ್ಕಾರದ ನಿರ್ದೇಶನದಂತೆ ವಿಚಾರಣಾ ಆಯೋಗ ವರದಿ ಸಿದ್ದಪಡಿಸಿತ್ತು.