ಬೆಂಗಳೂರು: BMTCಯ 171 ಚಾಲಕರಿಗೆ ಅಪಘಾತ ರಹಿತವಾಗಿ ಚಾಲನೆ ಮಾಡಿದ್ದಕ್ಕಾಗಿ, ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಮುಖ್ಯಮಂತ್ರಿ ಚಿನ್ನದ ಪದಕವನ್ನು ವಿತರಿಸಿದರು.
ಇಂದು ನಮ್ಮ ಎಲ್ಲಾ ಚಾಲನಾ ಸಿಬ್ಬಂದಿಗಳಿಗೂ ರಾಷ್ಟ್ರೀಯ ಚಾಲಕರ ದಿನಾಚರಣೆಯ ಶುಭಾಶಯಗಳು ತಿಳಿಸುತ್ತಾ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 171 ಅರ್ಹ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ವಿತರಿಸಿದೆ.
25 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿದ 139 ಚಾಲಕರು ಹಿರಿಯ ಚಾಲಕ ಹುದ್ದೆಗೆ ಪದೋನ್ನತಿ ಹೊಂದಿದ್ದು ಸಾಂಕೇತಿಕವಾಗಿ 13 ಚಾಲಕರಿಗೆ ಪದೋನ್ನತಿ ಆದೇಶವನ್ನು ವಿತರಿಸಲಾಯಿತು. 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕಕ್ಕೆ ಅರ್ಹರಿದ್ದಾರೆ.
ಈ ಸಂದರ್ಭದಲ್ಲಿ ಕಲಾಕೃಷ್ಣಮೂರ್ತಿ, ಭಾಪೊಸೇ, ನಿರ್ದೇಶಕರು ( ಭದ್ರತಾ & ಜಾಗೃತ) ಹಾಗೂ ಬಿಎಂಟಿಸಿಯ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
BREAKING: ಗದಗದಲ್ಲಿ ‘ಸರ್ಕಾರಿ ಬಸ್ ಹಾಗೂ ಲಾರಿ’ ನಡುವೆ ಭೀಕರ ಅಪಘಾತ: ಮೂವರು ಸಾವಿನ ಶಂಕೆ
ಶಕ್ತಿ ಯೋಜನೆಯಡಿ ಇದುವರೆಗೆ 139.36ಕೋಟಿ ಹೆಣ್ಣು ಮಕ್ಕಳ ಪ್ರಯಾಣ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್