ನವದೆಹಲಿ : ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಲಿಂಗಾಯತ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ಸೇರ್ಪಡೆಯಾಗಲು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ಈ ಮಾತುಕತೆಯೂ ಯಶಸ್ವಿಯಾಗಿದ್ದು, ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಆಗಿದ್ದು, .
ಇದೆ ವಿಷಯದ ಕುರಿತಾಗಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಭೂಪೇಂದ್ರ ಯಾದವ್, ಬಿಎಸ್ ಯಡಿಯೂರಪ್ಪ, ಬಿ ವೈ ಜಯಂದ್ರ ಹಾಗೂ ಬಿಜೆಪಿಯ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಯ ಶಾಲು ಹಾಕಿ ಹೂಗುಚ್ಚ ನೀಡಿ ಜಗದೀಶ ಶೆಟ್ಟರ್ ರವರನ್ನು ಬರಮಾಡಿಕೊಳ್ಳಲಾಯಿತು.
ಸುದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಇವತ್ತು ಬಹಳ ಸಂತೋಷದ ಸಂಗತಿ ನಾನು ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದು ಅಲ್ಲಿಂದ ಇಲ್ಲಿಯವರೆಗೆ ಕಳೆದ 8-9 ತಿಂಗಳಿಂದ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ರಾಜ್ಯದಲ್ಲಿರುವಂತ ಶಾಸಕರು ಮಾಜಿ ಶಾಸಕರು ಇನ್ನಿತರ ಮುಖಂಡರು ನಮ್ಮ ರಾಜ್ಯದ ನಾಯಕರುಗಳು ಎಲ್ಲರ ಅಪೇಕ್ಷೆ ಇತ್ತು ಬಿಜೆಪಿಗೆ ಮರಳುವಂತೆ ಮಾಡಿದೆ.
ಇವತ್ತು ಬೆಳಿಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೇನೆ ಬಹಳ ಅತ್ಯಂತ ಗೌರವದಿಂದ ಹೆಚ್ಚಿನ ರೀತಿಯಾದ ಪ್ರೀತಿ ವಿಶ್ವಾಸದಿಂದ ಅವರು ನಮ್ಮನ್ನು ಬರಮಾಡಿಕೊಂಡರು ಅದೇ ರೀತಿಯಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಅವರಾದ ನಡ್ದ ಅವರನ್ನು ಭೇಟಿಯಾಗುತ್ತೇವೆ ಬಿಜೆಪಿಗೆ ಮತ್ತೆ ಇಂದು ಸೇರ್ಪಡೆ ಆಗುತ್ತಿರುವುದು ಸಂತೋಷದ ಸಂಗತಿಯಾಗಿದೆ ವಿಧಾನಪರಿಷತ್ತಿನ ಕಾಂಗ್ರೆಸ್ ಪಕ್ಷದ ಕೆಲಸ ಮಾಡುತ್ತಿದ್ದೇನೆ.ಈ ಹಿನ್ನೆಲೆಯಲ್ಲಿ ಕರ್ನಾಟಕದ ಪರಿಷತ್ ಸಭಾಪತಿಯಾದ ಹೊರಟ್ಟಿ ಅವರಿಗೆ ಕರೆ ಮೂಲಕ ಮಾತನಾಡಿದ್ದು ಫ್ಯಾಕ್ಸ್ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.
ಕರ್ನಾಟಕದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರದ ಡಿಕೆ ಶಿವಕುಮಾರ್ ಅವರಿಗೂ ಸಹಿತ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆನೆ ಇಮೇಲ್ ಮೂಲಕ್ ತಿಳಿಸಿದ್ದೇನೆ. ದೇಶದ ಒಗ್ಗೂಡಿಸುವಂಥದ್ದು ದೇಶದ ಹಿತರಕ್ಷಣೆ ಹಿನ್ನೆಲೆಯಲ್ಲಿ ಕಳೆದ ಹತ್ತು ವರ್ಷದಿಂದ ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಭಾರತದ ಪ್ರಗತಿಗೆ ಕೆಲಸ ಮಾಡಿದ್ದಾರೆ.
ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕು ಮತ್ತೊಮ್ಮೆ ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕು ಅನ್ನೋ ವಿಚಾರ ಬಂದು ತಕೊಂಡು ಭಾರತೀಯ ಜನತಾ ಪಾರ್ಟಿಗೆ ಮರು ಸೇರ್ಪಡೆಯಾಗುತ್ತಿದ್ದೇನೆ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಕಾರ್ಯಗಳನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ ಜಗದೀಶ್ ಶೆಟ್ಟರ್ ಅವರು ಹಿಂದೆ ಮುಖ್ಯಮಂತ್ರಿ ಆಗಿ ಪಕ್ಷದ ಅನೇಕ ಜವಾಬ್ದಾರಿಗಳನ್ನು ವಹಿಸಿಕೊಂಡು ದುಡಿದಂತಹ ವ್ಯಕ್ತಿಯಾಗಿದ್ದಾರೆ ನಮ್ಮೆಲ್ಲರ ಕಾರ್ಯಕರ್ತರ ಅಪೇಕ್ಷೆಯ ಇದೀಗ ಅವರು ಬಿಜೆಪಿಗೆ ಮರಳಿದ್ದಾರೆ ಈ ವಿಷಯದ ಕುರಿತಾಗಿ ನಾನು ಜಗದೀಶ್ ಶೆಟ್ಟರ್ ವಿಜಯೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಈ ವಿಷಯ ಪ್ರಸ್ತಾಪಿಸಿದಾಗ ಅವರು ಕೂಡ ಬಹಳ ಸಂತೋಷ ವ್ಯಕ್ತಪಡಿಸಿದರು. ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಿರುವುದರಿಂದ ಬಿಜೆಪಿಗೆ ದೊಡ್ಡ ಶಕ್ತಿ ಬಂದಾಗಿದೆ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲು ಸಹಕಾರಿಯಾಗುತ್ತದೆ ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿಗೆ ಜಗದೀಶತ ರವರನ್ನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ಕೂಡ ರಾಜೀನಾಮೆ ನೀಡಿ ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾಗಿದ್ದಾರೆ. ಅವರು ಮರಳಿ ಪಕ್ಷಕ್ಕೆ ಬಂದಿರುವುದು ರಾಜ್ಯದ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆ ದೃಷ್ಟಿಯಲ್ಲಿ ದೊಡ್ಡ ಶಕ್ತಿ ಬಂದಂತಾಗಿದೆ ರಾಜ್ಯದ ನಮ್ಮ ಎಲ್ಲಾ ಹಿರಿಯರು ಮತ್ತು ಕಾರ್ಯಕರ್ತರ ಅಪೇಕ್ಷೆ ಕೂಡ ಇತ್ತು ಜಗದೀ ಶೆಟ್ಟರ್ ಅವರು ಹಿರಿಯರಿದ್ದು ಅವರನ್ನು ವಾಪಸ್ ಬಿಜೆಪಿಗೆ ಕರೆ ತರಬೇಕೆಂಬುದು ಇತ್ತು ಅದಕ್ಕೆ ಪಕ್ಷಕ್ಕೆ ಲಾಭವಾಗುತ್ತದೆ ಕೂಡ ಎಂದು ಹಲವಾರು ದಿನಗಳಿಂದ ಚರ್ಚೆಯಾಗುತ್ತಿತ್ತು.
ಇವತ್ತು ಬೆಳಿಗ್ಗೆ ಭಾರತೀಯ ಜನತಾ ಪಾರ್ಟಿಯ ವರಿಷ್ಠ ಆಗಿರುವಂತಹ ಗ್ರಹಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಮುಖಂಡರೆಲ್ಲ ಜೊತೆ ಚರ್ಚೆ ಮಾಡಿ ಯಾವುದೇ ಒಂದು ಅಪೇಕ್ಷೆ ಇಲ್ಲದೇನೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂಬ ವಿಚಾರ ಕೂಡ ತುಂಬಾ ಸಂತೋಷವನ್ನು ವ್ಯಕ್ತಪಡಿಸಿದ್ದರು. ರಾಜ್ಯದ ಪ್ರತಿಭಾ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಕೂಡ ಬಿಜೆಪಿಗೆ ಜಗದೀಶಟರ್ ಮರಳಿರುವುದು ತುಂಬಾ ಸಂತೋಷ ತಂದಿದೆ ಎಂದು ರಾಜ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.