ಬೆಂಗಳೂರು: ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್ ನ ಪ್ರಮುಖ ನಾಯಕರೂ ಕೂಡ ಪಕ್ಷಕ್ಕೆ ಬರಲಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ ಗೆ ಹೋಗಿದ್ದರು ಎಂದು ಹೇಳಿದರು.
ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್ ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್ ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದೆ. ಇದು ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರನ್ನು ಯಾರೂ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಯಾವಾಗಲೂ ಬ್ಲಾಕ್ ಮೇಲ್ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಇಡೀ ದೇಶದಲ್ಲಿ ದೇಶವೇ ಮೊದಲು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಿದ್ದಾಂತವಾಗಿದೆ. ಈಗ ಎಡ, ಬಲ ಸಿದ್ದಾಂತ ಇಲ್ಲ. ದೇಶದ ಅಭಿವೃದ್ದಿ ಮೊದಲ ಆದ್ಯತೆ, ಈಗ ಅದೇ ರಾಜಕೀಯದ ಸಿದ್ದಾಂತವಾಗಿದೆ ಎಂದು ಹೇಳಿದರು.
BIG NEWS: ‘ಲಕ್ಷ್ಮಣ್ ಸವದಿ’ ಬಿಜೆಪಿ ಸೇರ್ಪಡೆ ಚರ್ಚೆಯ ಬೆನ್ನಲ್ಲೇ ‘ಡಿಸಿಎಂ ಡಿಕೆ ಶಿವಕುಮಾರ್’ ಭೇಟಿ