ಮಹಾರಾಷ್ಟ್ರ : ಮಹಾರಾಷ್ಟ್ರದ ಮುಂಬೈನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿಯಿಂದ ರೆಸ್ಟೋರೆಂಟ್ ಒಂದು ಹೊತ್ತಿ ಉರಿದಿರುವ ಘಟನೆ ಮುಂಬೈನ ಕಾಮಾಟಿಪುರ ಬಳಿ ಇರುವ ರೆಸ್ಟೋರೆಂಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿಕೊಂಡಿರುವ ಘಟನೆ ನಡೆದಿದೆ.
ರೆಸ್ಟೋರೆಂಟ್ ಬೆಂಕಿಯಿಂದ ಹೊತ್ತಿ ಉರಿದಿದೆ ಎನ್ನಲಾಗುತ್ತಿದ್ದು, ಅಗ್ನಿ ಅವಘಡದಲ್ಲಿ ಯಾವುದೇ ರೀತಿಯಾದಂತಹ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಅಪಾರ್ಟ್ಮೆಂಟ್ ನಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿವೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ.
ರೆಸ್ಟೋರೆಂಟ್ ಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರ ಇರಬಹುದು ಎಂದು ಶಂಕಿಸಲಾಗುತ್ತಿದ್ದು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಅಲ್ಲದೆ ಅಗ್ನಿಶಾಮಕ ದಳ ಸಿಬ್ಬಂದಿ ರೆಸ್ಟೋರೆಂಟ್ ಗೆ ಹೊಂದಿಕೊಂಡಿರುವ ಬೆಂಕಿಯನ್ನು ನಂದಿಸಲು ಹರ ಸಾಹಸ ಪಡುತ್ತಿರುವುದು ಕಂಡುಬಂದಿದೆ.