ಬೆಂಗಳೂರು: ರಾಜ್ಯದ 34 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಿ, ಸರ್ಕಾರದ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮೂಲಕ 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿಎನ್ ನಾಗ ಪ್ರಶಾಂತ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಮುಖ್ಯಮಂತ್ರಿಯವರ ನಡವಳಿಯಂತೆ ದಿನಾಂಕ 26-01-2024ರನವ್ಯ ಈ ಕೆಳಕಂಡ ವಿಧಾನಸಭಾ ಸದಸ್ಯರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ನಿಗಮ-ಮಂಡಳಿಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಹೀಗಿದೆ 34 ಶಾಸಕರಿಗೆ ನೀಡಲಾದ ನಿಗಮ-ಮಂಡಳಿಯ ಅಧ್ಯಕ್ಷ ಸ್ಥಾನದ ಪಟ್ಟಿ
- ಹಂಪನಗೌಡ ಬಾದರ್ಲಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
- ಅಪ್ಪಾಜಿ ಸಿಎಸ್ ನಾಡಗೌಡ – ಅಧ್ಯಕ್ಷರು, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
- ಭರಮಗೌಡ ಅಲಗೌಡ ಕಾಗೆ – ಅಧ್ಯಕ್ಷರು, ಹುಬ್ಬಳ್ಳಿ ಸಾರಿಗೆ ನಿಗಮ
- ಹುಲ್ಲಪ್ಪ ಯಮನಪ್ಪ ವೈ ಮೇಟಿ – ಅಧ್ಯಕ್ಷರು, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
- ಎಸ್ ಆರ್ ಶ್ರೀನಿವಾಸ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
- ಬಸವರಾಜ್ ನೀಲಪ್ಪ ಶಿವಣ್ಣನವರ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
- ಬಿಜಿ ಗೋವಿಂದಪ್ಪ – ಅಧ್ಯಕ್ಷರು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
- ಹೆಚ್ ಸಿ ಬಾಲಕೃಷ್ಣ – ಅಧ್ಯಕ್ಷರು, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
- ಜಿಎಸ್ ಪಾಟೀಲ್ – ಅಧ್ಯಕ್ಷರು, ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
- ಎನ್ ಎ ಹ್ಯಾರೀಸ್ – ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
- ಕೌಜಲಗಿ ಮಹಾಂತೇಶ್ ಶಿವಾನಂದ – ಅಧ್ಯಕ್ಷರು, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
- ಸಿ.ಪುಟ್ಟರಂಗಶೆಟ್ಟಿ – ಅಧ್ಯಕ್ಷರು, ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
- ಜಿಟಿ ಪಾಟೀಲ್ – ಅಧ್ಯಕ್ಷರು, ಹಟ್ಟಿ ಚಿನ್ನದಗಣಿ ನಿಯಮಿತ
- ರಾಜಾ ವೆಂಕಟಪ್ಪ ನಾಯಕ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಉಗ್ರಾಹಣ ನಿಗಮ
- ಬಿಕೆ ಸಂಗಮೇಶ್ – ಅಧ್ಯಕ್ಷರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ
- ಕೆಎಂ ಶಿವಲಿಂಗೇಗೌಡ – ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ
- ಅಬ್ಬಯ್ಯ ಪ್ರಸಾದ್ – ಅಧ್ಯಕ್ಷರು, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
- ಬಿಕೆ ಗೋಪಾಲಕೃಷ್ಣ ಬೇಳೂರು – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
- ಎಸ್ ಎನ್ ನಾರಾಯಣಸ್ವಾಮಿ – ಅಧ್ಯಕ್ಷರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
- ಟಿ.ರಘುಮೂರ್ತಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
- ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಅಧ್ಯಕ್ಷರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
- ಬಿ ಶಿವಣ್ಣ – ಅಧ್ಯಕ್ಷರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
- ಎಸ್ ಎನ್ ಸುಬ್ಬಾರೆಡ್ಡಿ – ಅಧ್ಯಕ್ಷರು, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
- ವಿನಯ್ ಕುಲಕರ್ಣಿ- ಅಧ್ಯಕ್ಷರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
- ಅನಿಲ್ ಚಿಕ್ಕಮಾದು – ಅಧ್ಯಕ್ಷರು, ಜಂಗಲ್ ಲಾಡ್ಜಸ್
- ಬಸವನಗೌಡ ದದ್ದಲ್ – ಅಧ್ಯಕ್ಷರು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
- ಕನೀಜ್ ಫಾತಿಮಾ – ಅಧ್ಯಕ್ಷರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
- ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಅಧ್ಯಕ್ಷರು, ಕರ್ನಾಟಕ ಕ್ರೀಡಾ ಪ್ರಾಧಿಕಾರ
- ಟಿಡಿ ರಾಜೇಗೌಡ – ಅಧ್ಯಕ್ಷರು, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
- ರೂಪಕಲಾ ಎಂ – ಅಧ್ಯಕ್ಷರು, ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
- ಸತೀಶ್ ಕೃಷ್ಣ ಸೈಲ್ – ಅಧ್ಯಕ್ಷರು, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್
- ಶರತ್ ಕುಮಾರ್ ಬಚ್ಚೇಗೌಡ – ಅಧ್ಯಕ್ಷರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
- ಜೆ.ಎಂ ಗಣೇಶ್ – ಅಧ್ಯಕ್ಷರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
- ಬಸನಗೌಡ ತುರುವಿಹಾಳ – ಅಧ್ಯಕ್ಷರು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಸೆಲೆಬ್ರಿಟಿಗಳ 1,000 ಕ್ಕೂ ಹೆಚ್ಚು ‘ಡೀಪ್ಫೇಕ್’ ಹಗರಣ ಜಾಹೀರಾತು ವೀಡಿಯೊಗಳನ್ನು ಅಳಿಸಿದ YouTube
ಬಿಹಾರದಲ್ಲಿ ಹೊಸ ಗಾಳಿ ; ಜ.28ರಂದು ಸಿಎಂ ಸ್ಥಾನಕ್ಕೆ ‘ನಿತೀಶ್’ ರಾಜೀನಾಮೆ.? ಅದೇ ದಿನ ಹೊಸ ಸರ್ಕಾರ ರಚನೆ