ಶಿವಮೊಗ್ಗ: ಶಿವಮೊಗ್ಗದ ಬಿಜೆಪಿ ಸಂಸದರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಅವರು ಶುಕ್ರವಾರ ಬೆಕ್ಕಿನಕಲ್ಮಠದಲ್ಲಿಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಇನ್ನೇರಡು ತಿಂಗಳಲ್ಲಿನಲ್ಲಿ ಲೋಕಸಭಾ ಚುನಾವಣೆ ಬರಲಿದ್ದು, ರಾಘವೇಂದ್ರ ಅವರೇ ಸ್ಪರ್ಧಿಸುತ್ತಾರೆ. ಬಿಜೆಪಿಯಿಂದ ಬೇರೆ ಯಾರಿಗೂ ಟಿಕೆಟ್ ನೀಡುವುದಿಲ್ಲ. ಅವರು ಮತ್ತೆ ಸ್ಪರ್ಧೆ ಮಾಡೇ ಮಾಡುತ್ತಾರೆ. ಅವರನ್ನು ಗೆಲ್ಲಿಸುವ ದೊಡ್ಡ ಕರ್ತ್ಯವನ್ನು ಮಾಡಬೇಕು ಅಂತ ಹೇಳಿದ್ದಾರೆ.
ಇನ್ನೂ ರಾಘವೇಂದ್ರ ಅವರಂತಹ ಸಂಸತ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಏಕೆಂದರೆ ತಮ್ಮ ಕ್ಷೇತ್ರದಲ್ಲಿ ಯಾವ ಕೆಲಸಗಳಾಗಬೇಕೆಂದು ನೋಡಿಕೊಂಡು ಆ ಎಲ್ಲವನ್ನು ತಮ್ಮ ಕೈಯಿಂದ ಆಗದೇ ಇದ್ದರೂ ಸಹ ಆಗುವಂತಹ ರೀತಿಯಲ್ಲಿ ಕೆಲಸಗಳನ್ನು ಮಾಡಿ ತೋರಿಸಿಕೊಟ್ಟ ಧೀಮಂತ ನಾಯಕ ಎಂದರೆ ತಪ್ಪಾಗಲಾರದು ಅಂಗತ ಅವರು ಹೇಳಿದರು.