ವಿಜಯಪುರ ::ವಿಜಯಪುರ ಜಿಲ್ಲೆಯಲ್ಲಿ ವಿವಿಧಡೆ ಭೂಕಂಪನ ಮುಂದುವರೆದಿದ್ದು, ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ ತಿಳಿದುಬಂದಿದೆ. ವಿಜಯಪುರ ನಗರದಲ್ಲೂ ಎರಡು ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ.
ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ತೀರ್ವತೆಯನ್ನು ರಿಕ್ಟರ್ ಮಾಪಕದಲ್ಲಿ 2.9 ಎಂದು ಅಳೆಯಲಾಗಿದೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ. ಭೂಕಂಪನದಿಂದ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿನ ಸಾಮಾಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಪದೇ ಪದೆ ಭೂಕಂಪನದಿಂದ ಜನತೆ ಆತಂಕಗೊಂಡಿದ್ದಾರೆ.
ಅಲ್ಲದೆ ಕಳೆದ ವರ್ಷ ಡಿಸೆಂಬರ್ 8 ರಂದು ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಭೂಕಂಪವಾಗಿತ್ತು.ಜಿಲ್ಲೆಯ ಉಕಿಮನಾಳ ಗ್ರಾಮದಲ್ಲಿ 3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ದೃಢಪಡಿಸಿದ್ದರೂ. ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ ಆಗುತ್ತಲೇ ಇದೆ