Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯ ಗುಂಡಿನ ದಾಳಿ : ಇಬ್ಬರು ಸೈನಿಕರು ಹುತಾತ್ಮ, ಐವರು ನಾಗರಿಕರು ಸಾವು.!

11/05/2025 8:53 AM

ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ

11/05/2025 8:42 AM

SHOCKING : ಇನ್ಯಾವತ್ತೂ ಪಾಕಿಸ್ತಾನಕ್ಕೆ ಹೋಗಲ್ಲ ಅಂತ ಕಣ್ಣೀರಿಟ್ಟ ಟಾಮ್ ಕರನ್ : ಕಹಿ ಅನುಭವ ಬಿಚ್ಚಿಟ್ಟ `PSL’ ಆಟಗಾರ.!

11/05/2025 8:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಬೆಂಗಳೂರು ಶಿಕ್ಷಕರ ಕ್ಷೇತ್ರ’ದ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಪುಟ್ಟಣ್ಣ’ ನಾಮಪತ್ರ ಸಲ್ಲಿಕೆ
KARNATAKA

BREAKING: ‘ಬೆಂಗಳೂರು ಶಿಕ್ಷಕರ ಕ್ಷೇತ್ರ’ದ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಪುಟ್ಟಣ್ಣ’ ನಾಮಪತ್ರ ಸಲ್ಲಿಕೆ

By kannadanewsnow0929/01/2024 7:51 PM

ಬೆಂಗಳೂರು; ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುಟ್ಟಣ್ಣ ಅವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿಗೆ ತರಳಿ ನಾಮಪತ್ರ ಸಲ್ಲಿಸಿದರು.

ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ವಿಧಾನಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಃ ಪುಟ್ಟಣ್ಣ ಅವರೇ ಕಣಕ್ಕಿಳಿದಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿ, ಪುಟ್ಟಣ್ಣ ಅವರು ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ನಾಯಕರಾಗಿದ್ದು, ಅವರು ಈ ಬಾರಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸುಧಾಕರ್‌ ಮಾತನಾಡಿ, ಈಗಾಗಲೇ ನಾಲ್ಕು ಬಾರಿ ಮೇಲ್ಮನೆಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಶಿಕ್ಷಕರು ಮತ್ತು ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ‌. ಪಟ್ಟಣ್ಣ ಗೆಲುವು ನಿಶ್ಚಿತ ಎಂದು ಹೇಳಿದರು.

ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಂದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕ ಸಮುದಾಯದ ಪ್ರತಿಯೊಂದು ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುತ್ತೇವೆ. ಶಿಕ್ಷಕ ಸಮುದಾಯ ಮತ್ತೊಮ್ಮೆ ತಮ್ಮನ್ನು ಬೆಂಬಲಿಸಲಿದೆ ಎಂದು ಹೇಳಿದರು.

ಶಾಸಕ ಬಾಲಕೃಷ್ಣ ಮಾತನಾಡಿ, ಪುಟ್ಟಣ್ಣ ಸದಾ ಶಿಕ್ಷಕರ ಬಗ್ಗೆ ತುಡಿತ ಮತ್ತು ಕಾಳಜಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಪುಟ್ಟಣ್ಣ ಅವರು ಶಾಸಕರಾಗಲು ಪ್ರಯತ್ನಿಸಿದರು. ಆದರೆ ಶಿಕ್ಷಕರ ಸೆಳೆತ ಅವರನ್ನು ಮತ್ತೆ ಶಿಕ್ಷಕರ ಕ್ಷೇತ್ರಕ್ಕೆ ವಾಪಸ್‌ ಕರೆತಂದಿದೆ ಎಂದರು.

ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಆನೇಕಲ್‌ ರಾಮೋಜಿಗೌಡ ಮಾತನಾಡಿ, ಪಟ್ಟಣ್ಣ ಜನಾನುರಾಗಿ. ಜನಪರ, ಜನಪ್ರಿಯ ನಾಯಕ. ಅವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸುತ್ತೇವೆ ಎಂದರು.

‘ರೈತ’ರಿಗೆ ಗುಡ್ ನ್ಯೂಸ್: ಶೇ.50ರಷ್ಟು ರಿಯಾಯಿತಿ ದರದಲ್ಲಿ ‘ಕೃಷಿ ಉಪಕರಣ’ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ

11/05/2025 8:42 AM3 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!

11/05/2025 8:05 AM3 Mins Read

BREAKING : ಕಾವೇರಿ ನದಿಯಲ್ಲಿ ಕರ್ನಾಟಕದ ಖ್ಯಾತ ಕೃಷಿ ವಿಜ್ಞಾನಿ `ಡಾ.ಸುಬ್ಬಣ್ಣ ಅಯ್ಯಪ್ಪನ್’ ಶವವಾಗಿ ಪತ್ತೆ.!

11/05/2025 7:48 AM1 Min Read
Recent News

BREAKING : ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಯ ಗುಂಡಿನ ದಾಳಿ : ಇಬ್ಬರು ಸೈನಿಕರು ಹುತಾತ್ಮ, ಐವರು ನಾಗರಿಕರು ಸಾವು.!

11/05/2025 8:53 AM

ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ

11/05/2025 8:42 AM

SHOCKING : ಇನ್ಯಾವತ್ತೂ ಪಾಕಿಸ್ತಾನಕ್ಕೆ ಹೋಗಲ್ಲ ಅಂತ ಕಣ್ಣೀರಿಟ್ಟ ಟಾಮ್ ಕರನ್ : ಕಹಿ ಅನುಭವ ಬಿಚ್ಚಿಟ್ಟ `PSL’ ಆಟಗಾರ.!

11/05/2025 8:40 AM

ಗಾಝಾ ಮೇಲೆ ಇಸ್ರೇಲ್ ದಾಳಿ: 21 ಮಂದಿ ಸಾವು | Israel-Hamas war

11/05/2025 8:40 AM
State News
KARNATAKA

ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ

By kannadanewsnow8911/05/2025 8:42 AM KARNATAKA 3 Mins Read

ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!

11/05/2025 8:05 AM

BREAKING : ಕಾವೇರಿ ನದಿಯಲ್ಲಿ ಕರ್ನಾಟಕದ ಖ್ಯಾತ ಕೃಷಿ ವಿಜ್ಞಾನಿ `ಡಾ.ಸುಬ್ಬಣ್ಣ ಅಯ್ಯಪ್ಪನ್’ ಶವವಾಗಿ ಪತ್ತೆ.!

11/05/2025 7:48 AM

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವ ಪತ್ತೆ.!

11/05/2025 7:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.