Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗ ಶಾಸಕ ಭೈರತಿ ಬಸವರಾಜ್

19/07/2025 3:59 PM

ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

19/07/2025 3:54 PM

ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿಎಂ ಸಿದ್ಧರಾಮಯ್ಯ

19/07/2025 3:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ

By KNN IT TEAM30/01/2024 12:48 PM

ಬೆಂಗಳೂರು: ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ಮಹಾತ್ಮಾ ಗಾಂಧೀಜಿಯವರು1948ರ ಜನವರಿ 30 ರಂದು ಗೋಡ್ಸೆ ಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದರು.

ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ:

ಅವರು ತಮ್ಮ ಕೊನೆಯುಸಿರೆಳೆದಾಗಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್ ’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು. ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದರು.

ಸಮಾಜದಲ್ಲಿ ಶಾಂತಿ ನೆಲೆಸಬೇಕು.
ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿದ್ದಾರೆ. ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು. ಮನುಷ್ಯ ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದರು.

ಮಂಡ್ಯ ಘಟನೆ: ರಾಜಕೀಯ ದುರುದ್ದೇಶದಿಂದ ಕೂಡಿದೆ:

ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ.

ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.

It was Godse who killed Ram bhakt Gandhi who had immense faith in Lord Ram: Siddaramaiah
Share. Facebook Twitter LinkedIn WhatsApp Email

Related Posts

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗ ಶಾಸಕ ಭೈರತಿ ಬಸವರಾಜ್

19/07/2025 3:59 PM1 Min Read

ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

19/07/2025 3:54 PM2 Mins Read

ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿಎಂ ಸಿದ್ಧರಾಮಯ್ಯ

19/07/2025 3:52 PM2 Mins Read
Recent News

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗ ಶಾಸಕ ಭೈರತಿ ಬಸವರಾಜ್

19/07/2025 3:59 PM

ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

19/07/2025 3:54 PM

ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿಎಂ ಸಿದ್ಧರಾಮಯ್ಯ

19/07/2025 3:52 PM

‘GPay, PhonePe, Paytm’ನಲ್ಲಿ ಪಾವತಿ ವಿಫಲವಾದ್ರು ಹಣ ಕಟ್ ಆಗಿದ್ಯಾ.? ಈ ಹಂತ ಅನುಸರಿಸಿ, ಮರಳಿ ಖಾತೆ ಸೇರುತ್ತೆ

19/07/2025 3:49 PM
State News
KARNATAKA

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗ ಶಾಸಕ ಭೈರತಿ ಬಸವರಾಜ್

By kannadanewsnow0919/07/2025 3:59 PM KARNATAKA 1 Min Read

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜ್ ಗೆ ವಿಚಾರಣೆಗೆ…

ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

19/07/2025 3:54 PM

ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿಎಂ ಸಿದ್ಧರಾಮಯ್ಯ

19/07/2025 3:52 PM

ಒಂದೇ ದಿನ ಮೈಸೂರು ಜಿಲ್ಲೆಯ 2578 ಕೋಟಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಿದ ಸಿಎಂ ಸಿದ್ಧರಾಮಯ್ಯ

19/07/2025 3:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.