ಹಾಸನ : ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಂದ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರ ಹಳ್ಳಿ ಕೂಡಿಗೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಅಪಘಾತ ಸಂಭವಿಸಿದೆ.
ಈಶ್ವರ ಹಳ್ಳಿ ಕೂಡಿಗೆ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ತೆರಳುತ್ತಿದ್ದ ಪ್ರದೀಪ್ (30) ಗುರು (25) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರಿನಲ್ಲಿದ್ದ ಮತ್ತಿಬರಿಗೆ ಗಂಭೀರವಾದಂತ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟಿಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಟೆಂಬರ್ ತುಂಬಿರುವಂತಹ ಲಾರಿ ಕೆಟ್ಟು ನಿಂತಿದ್ದು, ಈ ವೇಳೆ ದಟ್ಟವಾದ ಮಂಜು ಆವರಿಸಿದ್ದರಿಂದ, ಕೆಟ್ಟು ನಿಂತಿದ್ದ ಲಾರಿ ಕಾಣಿಸಿಲ್ಲ ಆದ್ದರಿಂದ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ ನಂತರ ಕಾರು ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ. ಘಟನೆ ಕುರಿತಂತೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.