ನವದೆಹಲಿ:ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.
ಹಾಗು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಇಂದು ಬಜೆಟ್ ಮಂಡಿಸಿ ಭಾಷಣದಲ್ಲಿ ಅವರು ಈ ಮಹತ್ವದ ಘೋಷಣೆ ಮಾಡಿದರು.
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು:
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಫೆಬ್ರವರಿ 1: 2024-2025 ರ ಮಧ್ಯಂತರ ಬಜೆಟ್ ಮಂಡನೆಗೆ ಮುಂಚಿತವಾಗಿ, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹಣಕಾಸು ಸಚಿವಾಲಯಕ್ಕೆ ಆಗಮಿಸಿದರು.
ಹಣಕಾಸು ಖಾತೆ ಸಚಿವ ಭಾಗವತ್ ಕರದ್ ಮತ್ತು ಪಂಕಜ್ ಚೌಧರಿ ಕೂಡ ಅವರೊಂದಿಗೆ ಹಣಕಾಸು ಸಚಿವಾಲಯಕ್ಕೆ ತೆರಳಿದ್ದರು.
ಈ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಕೇಂದ್ರ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಇದು ಅವರ ಆರನೇ ಬಜೆಟ್ ಮತ್ತು ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಕೊನೆಯದು. ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.